4:04 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ರಜಾ ದಿನದಂದು ಫೀಲ್ಡಿಗಿಳಿದ ಜಿಲ್ಲಾಧಿಕಾರಿ ಅಕ್ರಂ ಪಾಷ: ಶ್ರೀನಿವಾಸಪುರ ತಾಲೂಕು ಕಚೇರಿಗೆ ಭೇಟಿ; ವಿವಿಧ ವಿಭಾಗಗಳ ಪ್ರಗತಿ ಪರಿಶೀಲನೆ

24/12/2023, 21:33

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರಜಾ ದಿನದಂದು ಫೀಲ್ಡಿಗಿಳಿದು ಇಲ್ಲಿನ ತಾಲ್ಲೂಕು ಕಚೇರಿಗೆ ಶನಿವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಭೇಟಿ ನೀಡಿ, ವಿವಿಧ ವಿಭಾಗಗಳ ಪ್ರಗತಿ ಪರಿಶೀಲಿಸಿದರು.
ಕಚೇರಿ ಅವರಣದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಜಿಲ್ಲಾಧಿಕಾರಿ ತಹಶೀಲ್ದಾರ್ ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಖ್ಯವಾಗಿ ಚುನಾವಣಾ ಫಾರಂ ಪ್ರೊಸೆಸಿಂಗ್ ಮತ್ತು ಫ್ರೂಟ್ಸ್ ಎಫ್‍ಐಡಿ ಪ್ರಗತಿ ಪರಿಶೀಲನೆ ನಡೆಸಿದರು.
ರೈತರಿಗೆ ಸರ್ಕಾರದ ಸೌಲಭ್ಯ ದೊರೆಯುವಂತೆ ಮಾಡುವ ಉದ್ದೇಶದಿಂದ ಎಫ್‍ಐಡಿ ನೋಂದಣಿ ಕಾರ್ಯ ಚುರುಕುಗೊಳಿಸಬೇಕು. ಕಂದಾಯ ಇಲಾಖೆ ಸಿಬ್ಬಂದಿ, ಕೃಷಿ ಮತ್ತಿತರ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಫ್ರೂಟ್ಸ್ ಎಫ್‍ಐಡಿ ನೋಂದಣಿ ಗುರಿ ತಲುಪಬೇಕು. ಅದಕ್ಕೆ ಪೂರಕವಾಗಿ ಈ ಯೋಜನೆಯಿಂದ ಆಗುವ ಪ್ರಯೋಜನ ಕುರಿತು ರೈತರಿಗೆ ತಿಳಿಸಬೇಕು ಎಂದು ತಾಕೀತು ಮಾಡಿದರು.


ತಾಲ್ಲೂಕು ಕಚೇರಿ ಆವರಣಕ್ಕೆ ಸಿಮೆಂಟ್ ಹಾಸು ನಿರ್ಮಿಸುವ ಮತ್ತು ಕಚೇರಿ ಮುಂದೆ ರಸ್ತೆ ನಿರ್ಮಿಸುವ ಕಾಮಗಾರಿ ವೀಕ್ಷಿಸಿದರು ಕಾಮಗಾರಿ ಗುಣಮಟ್ಟದ ಬಗ್ಗೆ ಪರಿಶೀಲಿಸಿದರು. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.
ತಾಲ್ಲೂಕಿನ ರೋಣೂರು ಹೋಬಳಿ ವ್ಯಾಪ್ತಿಯ ಕೊಟ್ರಗುಳಿ ಮತ್ತು ದೇವಲಪಲ್ಲಿ ಗ್ರಾಮಕ್ಕೆ ಭೇಟಿ ನೀಡಿ, ಫಾರಂ ನಂಬರ್ 6,7,8 ಅರ್ಜಿಗಳು ಮತ್ತು ಎಫ್‍ಐಡಿ ನೋಂದಣಿ ಕುರಿತು ಪರಿಶೀಲಿಸಿದರು.
ತಹಶೀಲ್ದಾರ್ ಜಿ.ಎನ್. ಸುಧೀಂದ್ರ ,
ಪುರಸಭೆಯ ಮುಖ್ಯಅಧಿಕಾರಿ ವೈ ಎನ್ ಸತ್ಯನಾರಾಯಣ , ತಾಲ್ಲೂಕು ಕಚೇರಿ ಮತ್ತು ಪುರಸಭೆಯ ಸಿಬ್ಬಂದಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು