4:42 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ರಜಾ ದಿನದಂದು ಫೀಲ್ಡಿಗಿಳಿದ ಜಿಲ್ಲಾಧಿಕಾರಿ ಅಕ್ರಂ ಪಾಷ: ಶ್ರೀನಿವಾಸಪುರ ತಾಲೂಕು ಕಚೇರಿಗೆ ಭೇಟಿ; ವಿವಿಧ ವಿಭಾಗಗಳ ಪ್ರಗತಿ ಪರಿಶೀಲನೆ

24/12/2023, 21:33

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರಜಾ ದಿನದಂದು ಫೀಲ್ಡಿಗಿಳಿದು ಇಲ್ಲಿನ ತಾಲ್ಲೂಕು ಕಚೇರಿಗೆ ಶನಿವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಭೇಟಿ ನೀಡಿ, ವಿವಿಧ ವಿಭಾಗಗಳ ಪ್ರಗತಿ ಪರಿಶೀಲಿಸಿದರು.
ಕಚೇರಿ ಅವರಣದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಜಿಲ್ಲಾಧಿಕಾರಿ ತಹಶೀಲ್ದಾರ್ ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಖ್ಯವಾಗಿ ಚುನಾವಣಾ ಫಾರಂ ಪ್ರೊಸೆಸಿಂಗ್ ಮತ್ತು ಫ್ರೂಟ್ಸ್ ಎಫ್‍ಐಡಿ ಪ್ರಗತಿ ಪರಿಶೀಲನೆ ನಡೆಸಿದರು.
ರೈತರಿಗೆ ಸರ್ಕಾರದ ಸೌಲಭ್ಯ ದೊರೆಯುವಂತೆ ಮಾಡುವ ಉದ್ದೇಶದಿಂದ ಎಫ್‍ಐಡಿ ನೋಂದಣಿ ಕಾರ್ಯ ಚುರುಕುಗೊಳಿಸಬೇಕು. ಕಂದಾಯ ಇಲಾಖೆ ಸಿಬ್ಬಂದಿ, ಕೃಷಿ ಮತ್ತಿತರ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಫ್ರೂಟ್ಸ್ ಎಫ್‍ಐಡಿ ನೋಂದಣಿ ಗುರಿ ತಲುಪಬೇಕು. ಅದಕ್ಕೆ ಪೂರಕವಾಗಿ ಈ ಯೋಜನೆಯಿಂದ ಆಗುವ ಪ್ರಯೋಜನ ಕುರಿತು ರೈತರಿಗೆ ತಿಳಿಸಬೇಕು ಎಂದು ತಾಕೀತು ಮಾಡಿದರು.


ತಾಲ್ಲೂಕು ಕಚೇರಿ ಆವರಣಕ್ಕೆ ಸಿಮೆಂಟ್ ಹಾಸು ನಿರ್ಮಿಸುವ ಮತ್ತು ಕಚೇರಿ ಮುಂದೆ ರಸ್ತೆ ನಿರ್ಮಿಸುವ ಕಾಮಗಾರಿ ವೀಕ್ಷಿಸಿದರು ಕಾಮಗಾರಿ ಗುಣಮಟ್ಟದ ಬಗ್ಗೆ ಪರಿಶೀಲಿಸಿದರು. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.
ತಾಲ್ಲೂಕಿನ ರೋಣೂರು ಹೋಬಳಿ ವ್ಯಾಪ್ತಿಯ ಕೊಟ್ರಗುಳಿ ಮತ್ತು ದೇವಲಪಲ್ಲಿ ಗ್ರಾಮಕ್ಕೆ ಭೇಟಿ ನೀಡಿ, ಫಾರಂ ನಂಬರ್ 6,7,8 ಅರ್ಜಿಗಳು ಮತ್ತು ಎಫ್‍ಐಡಿ ನೋಂದಣಿ ಕುರಿತು ಪರಿಶೀಲಿಸಿದರು.
ತಹಶೀಲ್ದಾರ್ ಜಿ.ಎನ್. ಸುಧೀಂದ್ರ ,
ಪುರಸಭೆಯ ಮುಖ್ಯಅಧಿಕಾರಿ ವೈ ಎನ್ ಸತ್ಯನಾರಾಯಣ , ತಾಲ್ಲೂಕು ಕಚೇರಿ ಮತ್ತು ಪುರಸಭೆಯ ಸಿಬ್ಬಂದಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು