2:43 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ರಜಾ ದಿನದಂದು ಫೀಲ್ಡಿಗಿಳಿದ ಜಿಲ್ಲಾಧಿಕಾರಿ ಅಕ್ರಂ ಪಾಷ: ಶ್ರೀನಿವಾಸಪುರ ತಾಲೂಕು ಕಚೇರಿಗೆ ಭೇಟಿ; ವಿವಿಧ ವಿಭಾಗಗಳ ಪ್ರಗತಿ ಪರಿಶೀಲನೆ

24/12/2023, 21:33

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರಜಾ ದಿನದಂದು ಫೀಲ್ಡಿಗಿಳಿದು ಇಲ್ಲಿನ ತಾಲ್ಲೂಕು ಕಚೇರಿಗೆ ಶನಿವಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಭೇಟಿ ನೀಡಿ, ವಿವಿಧ ವಿಭಾಗಗಳ ಪ್ರಗತಿ ಪರಿಶೀಲಿಸಿದರು.
ಕಚೇರಿ ಅವರಣದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಜಿಲ್ಲಾಧಿಕಾರಿ ತಹಶೀಲ್ದಾರ್ ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಖ್ಯವಾಗಿ ಚುನಾವಣಾ ಫಾರಂ ಪ್ರೊಸೆಸಿಂಗ್ ಮತ್ತು ಫ್ರೂಟ್ಸ್ ಎಫ್‍ಐಡಿ ಪ್ರಗತಿ ಪರಿಶೀಲನೆ ನಡೆಸಿದರು.
ರೈತರಿಗೆ ಸರ್ಕಾರದ ಸೌಲಭ್ಯ ದೊರೆಯುವಂತೆ ಮಾಡುವ ಉದ್ದೇಶದಿಂದ ಎಫ್‍ಐಡಿ ನೋಂದಣಿ ಕಾರ್ಯ ಚುರುಕುಗೊಳಿಸಬೇಕು. ಕಂದಾಯ ಇಲಾಖೆ ಸಿಬ್ಬಂದಿ, ಕೃಷಿ ಮತ್ತಿತರ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಫ್ರೂಟ್ಸ್ ಎಫ್‍ಐಡಿ ನೋಂದಣಿ ಗುರಿ ತಲುಪಬೇಕು. ಅದಕ್ಕೆ ಪೂರಕವಾಗಿ ಈ ಯೋಜನೆಯಿಂದ ಆಗುವ ಪ್ರಯೋಜನ ಕುರಿತು ರೈತರಿಗೆ ತಿಳಿಸಬೇಕು ಎಂದು ತಾಕೀತು ಮಾಡಿದರು.


ತಾಲ್ಲೂಕು ಕಚೇರಿ ಆವರಣಕ್ಕೆ ಸಿಮೆಂಟ್ ಹಾಸು ನಿರ್ಮಿಸುವ ಮತ್ತು ಕಚೇರಿ ಮುಂದೆ ರಸ್ತೆ ನಿರ್ಮಿಸುವ ಕಾಮಗಾರಿ ವೀಕ್ಷಿಸಿದರು ಕಾಮಗಾರಿ ಗುಣಮಟ್ಟದ ಬಗ್ಗೆ ಪರಿಶೀಲಿಸಿದರು. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.
ತಾಲ್ಲೂಕಿನ ರೋಣೂರು ಹೋಬಳಿ ವ್ಯಾಪ್ತಿಯ ಕೊಟ್ರಗುಳಿ ಮತ್ತು ದೇವಲಪಲ್ಲಿ ಗ್ರಾಮಕ್ಕೆ ಭೇಟಿ ನೀಡಿ, ಫಾರಂ ನಂಬರ್ 6,7,8 ಅರ್ಜಿಗಳು ಮತ್ತು ಎಫ್‍ಐಡಿ ನೋಂದಣಿ ಕುರಿತು ಪರಿಶೀಲಿಸಿದರು.
ತಹಶೀಲ್ದಾರ್ ಜಿ.ಎನ್. ಸುಧೀಂದ್ರ ,
ಪುರಸಭೆಯ ಮುಖ್ಯಅಧಿಕಾರಿ ವೈ ಎನ್ ಸತ್ಯನಾರಾಯಣ , ತಾಲ್ಲೂಕು ಕಚೇರಿ ಮತ್ತು ಪುರಸಭೆಯ ಸಿಬ್ಬಂದಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು