6:52 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

ರಾಜಧರ್ಮ ರಾಜಕಾರಣ ಮೂಲಕ ಜನಪರ ಆಡಳಿತ ನೀಡಿದ್ದೇನೆ: ಶಾಸಕ ರಾಜೇಶ್ ನಾಯ್ಕ್

13/04/2023, 00:38

ಬಂಟ್ವಾಳ(reporterksrnataka.com):
ಐದು ವರ್ಷಗಳ ಕಾಲ ಶಾಸಕನಾಗಿ ಆಯ್ಕೆಯಾಗಲು ಕಾರಣರಾದ ಕ್ಷೇತ್ರದ ಜನತೆಗೆ ಧನ್ಯವಾದ ನೀಡಿ , ಮುಂದಿನ ಅವಧಿಯಲ್ಲಿ ಬಿಜೆಪಿಯ ಶಾಸಕರೇ ಆಯ್ಕೆಯಾಗುವ ದೃಷ್ಟಿಯಿಂದ ಹಿರಿಯರ ಮತದಾರರ, ಕಾರ್ಯಕರ್ತರ ಆಶೀರ್ವಾದ ಪಡೆಯಲು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ನೀವು ನನ್ನ ಜೊತೆಯಾಗಿ ನಿಂತು ಬೆಂಬಲ ನೀಡಿದರೆ ಅದುವೇ ದೊಡ್ಡ ಶಕ್ತಿ ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.
ಕೊಳ್ನಾಡು‌ ಶಕ್ತಿ ಕೇಂದ್ರದ ಮುಂಡಪ್ಪ ಪೂಜಾರಿ ಅವರ ಮನೆಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ರಾಜಧರ್ಮದ ರಾಜಕಾರಣದ ಮೂಲಕ ಕ್ಷೇತ್ರದಲ್ಲಿ ಸರ್ವರಿಗೂ ಸಮಾನವಾದ ರೀತಿಯ ಜನಪರವಾದ ಆಡಳಿತವನ್ನು ಮಾಡಿದ್ದೇನೆ, ನನ್ನ ಅಧಿಕಾರಕ್ಕೆ ಕ್ಷೇತ್ರದ ಜನತೆ ಹಾಗೂ ಅಧಿಕಾರಿಗಳು ಸಹಕಾರ ನೀಡಿದ್ದಾರೆ ಎಂದು ಅವರು ಹೇಳಿದರು.
ವೇದಿಕೆಯಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಜಿ.ಪಂ.ನಿಕಟಪೂರ್ವ ಸದಸ್ಯ ರವೀಂದ್ರ ಕಂಬಳಿ, ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಪ್ರಮುಖರಾದ ಮಾದವ ಮಾವೆ, ಜಯರಾಮ ಕುಟ್ರಕಲ , ಪುಷ್ಪರಾಜ ಚೌಟ, ಪ್ರಕಾಶ್ ಅಂಚನ್, ಅಭಿಷೇಕ್ ರೈ,ವಿಶ್ವನಾಥ ಪೂಜಾರಿ ಕೋಡಿ, ಗ್ರಾಪಂ ಸದಸ್ಯರಾದ ರಾಜಾರಾಂ ಹೆಗ್ಡೆ ಕುದ್ರಿಯಾ, ಹರೀಶ್ ಕುಡ್ತಮುಗೇರು,ಪ್ರಶಾಂತ್ ಶೆಟ್ಟಿ, ಲೋಹಿತ್ ಕೆಳಗಿನ ಅಗರಿ, ಕೃಷ್ಣಪ್ಪ ಪೂಜಾರಿ ಕುಡ್ತಮುಗೇರು, ಸೌಮ್ಯಲತಾ ಕಾಡುಮಠ, ಅನಿತಾ ಶೆಟ್ಟಿಗಾರ್, ಕಿಶೋರ್ ದೇವಾಡಿಗ, ಶಶಿಕಲಾ ಕುದ್ರಿಯಾ, ಪ್ರಮುಖರಾದ ನಾರಾಯಣ ಶೆಟ್ಟಿ ಕುಲ್ಯಾರು, ಮತ್ತಿತರರು ಉಪಸ್ಥಿತರಿದ್ದರು.

ಬಿಜೆಪಿ ಸೇರ್ಪಡೆ: ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಜಗದೀಶ್ ರೈ, ಗ್ರಾಪಂ ಸದಸ್ಯೆ ವಸಂತಿ , ಕಾರ್ಯಕರ್ತೆ ಮೋಹಿನಿ ಕಾಡುಮಠ ಅವರು ಬಿಜೆಪಿ ಪಕ್ಷದ ಸಿದ್ದಾಂತ ಹಾಗೂ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಹಾಗೂ ಶಾಸಕ ರಾಜೇಶ್ ನಾಯ್ಕ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಶಾಸಕ ರಾಜೇಶ್ ನಾಯ್ಕ್ ಅವರು ಬಿಜೆಪಿಯ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು