1:05 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ರಾಜಕೀಯ ಕೂಡ ಕ್ರಿಕೆಟ್ ತರಹ; ಆದರೆ, ಇಲ್ಲಿ ಬಾಲ್ ಎಲ್ಲಿಂದ ಬರುತ್ತೆ ಎನ್ನುವುದೇ ಗೊತ್ತಾಗೊಲ್ಲ: ಸ್ಪೀಕರ್ ಯು.ಟಿ. ಖಾದರ್ ಚಟಾಕಿ

06/01/2024, 12:41

ಮಂಗಳೂರು(reporterkarnataka.com): ರಾಜಕೀಯ‌ ಕೂಡ ಕ್ರಿಕೆಟ್ ಆಟದಂತೆ. ನೈಜ ಕ್ರಿಕೆಟ್ ನಲ್ಲಿ ಬಾಲ್ ಎಲ್ಲಿಂದ ಬರುತ್ತದೆ ಎಂದು ಗೊತ್ತಾಗುತ್ತದೆ. ಆದರೆ ರಾಜಕೀಯ ಕ್ರಿಕೆಟ್ ನಲ್ಲಿ ಬಾಲ್ ಎಲ್ಲಿಂದ ಬರುತ್ತೆ ಎನ್ನುವುದೇ ಗೊತ್ತಾಗೊಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮಾರ್ಮಿಕವಾಗಿ ನುಡಿದರು.
ನಗರದ ಹೊರವಲಯದ ಅಡ್ಯಾರ್‌ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್‌ ಮಂಗಳೂರು ರೋಹನ್‌ ಕಪ್‌-2024
ಕ್ರಿಕೆಟ್‌ ಪಂದ್ಯಾವಳಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಾಮಾಜಿಕ ಹೊಣೆಗಾರಿಕೆ ಅರಿತು ಪತ್ರಕರ್ತರು ಕಾರ್ಯನಿರ್ವಹಿಸಬೇಕು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ.
ಬ್ರ್ಯಾಂಡ್‌ ಮಂಗಳೂರು ಸ್ಲೋಗನ್‌ ಮೂಲಕ ಇಲ್ಲಿನ ಪತ್ರಕರ್ತರು ಕರಾವಳಿಯ ರಾಯಭಾರಿಗಳಾಗಿದ್ದಾರೆ. ಪತ್ರಕರ್ತರ ಸಂಘಗಳ ಅನ್ಯೋನ್ಯ ಚಟುವಟಿಕೆಗಳಿಗೆ ಎಲ್ಲರಿಗೂ ಮಾದರಿಯಾಗಿದ್ದು, ಇದು ಸಾಮಾಜಿಕ ಹಿತಾಸಕ್ತಿಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ಶ್ಲಾಘಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು