4:50 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ರಾಜಕೀಯ ಲಾಭಕ್ಕಾಗಿ ಬಿಜೆಪಿಯಿಂದ ಇಡಿ, ಐಟಿ ಬಳಕೆ: ಮಂಗಳೂರು ಪ್ರತಿಭಟನೆಯಲ್ಲಿ ಮಧು ಬಂಗಾರಪ್ಪ ಆರೋಪ

22/07/2022, 14:03

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಬ್ರಿಟಿಷರು ಒಡೆದು ಆಳುವ ಮೂಲಕ ನಮ್ಮೊಳಗೆ ಬಿರುಕು ತಂದರೆ, ಬಿಜೆಪಿ ಆಡಳಿತ ನಮ್ಮನ್ನು ಅಧೋಗತಿಗೆ ಇಳಿಸಿದೆ. ಕೇಂದ್ರ ಸರಕಾರ ಇಡಿ, ಐಟಿಯನ್ನು ರಾಜಕೀಯಕ್ಕಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪ ಆಪಾದಿಸಿದರು.


ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಅನಾವಶ್ಯಕವಾಗಿ ತೊಂದರೆ ನೀಡಲು ಇಡಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.


ಇಡಿ ವಿಚಾರಣೆ ನೆಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡಲಾಯಿತು. ಇದೀಗ ಸೋನಿಯಾ ಗಾಂಧಿ ಅವರ ವಿಚಾರಣೆ ನಡೆಸಲಾಗುತ್ತಿದೆ ಎಂದರು.


ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಾತನಾಡಿ, ಇಡಿ ವಿಚಾರಣೆಯ ನೆಪದಲ್ಲಿ ಬಿಜೆಪಿಯಿಂದ ಹೆದರಿಸುವ ಪ್ರಯತ್ನ ನಡೆಯುತ್ತಿದೆ. ಅದರೆ ನಾವು ಇದಕ್ಕೆಲ್ಲ ಹೆದರುವುದಿಲ್ಲ ಎಂದರು.


ಮಾಜಿ ಶಾಸಕರಾದ ಜೆ.ಆರ್. ಲೋಬೊ, ಐವನ್ ಡಿಸೋಜ, ಮಾಜಿ ಮೇಯರ್ ಗಳಾದ ಕವಿತಾ ಸನಿಲ್, ಶಶಿಧರ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಯುವ ಕಾಂಗ್ರೆಸ್ಮುಂ ಅಧ್ಯಕ್ಷ ಮಿಥುನ್ತಾ ರೈ, ಕಾರ್ಪೊರೇಟರ್ಆ ಪ್ರವೀಣ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು