1:42 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ರಾಜಕೀಯ ಉದ್ದೇಶದಿಂದ ಕೆರೆಗಳಿಗೆ ನೀರು ಹರಿಸುತ್ತಿಲ್ಲ, ನೀರಿನಲ್ಲಿ ರಾಜಕೀಯ ಮಾಡಬೇಕಾದ ಅಗತ್ಯವೂ ಇಲ್ಲ: ರಮೇಶ್ ಕುಮಾರ್

08/07/2021, 09:38

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com

ರೈತರು ಕೆಸಿ ವ್ಯಾಲಿ ನೀರಿನ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ತಾಲೂಕಿನ ಕಲ್ಲೂರು ಗ್ರಾಮದ ಕೆರೆಗೆ ಕೆಸಿ ವ್ಯಾಲಿ ನೀರು ಹರಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ , ಈ ಕೆರೆ ೨೭೨ ಎಕರೆ ವಿಸ್ತೀರ್ಣ ಹೊಂದಿದೆ. ಆಲವಟ್ಟ ಕೆರೆಯಿಂದ ನೀರು ಹರಿಸಲಾಗುವುದು , ಕೆರೆ ತುಂಬಿದಾಗ ಸುತ್ತಮುತ್ತಲಿನ ಗ್ರಾಮಗಳ ಚಿತ್ರಣ ಬದಲಾಗಲಿದೆ . ಅಂತರ್ಜಲ ವೃದ್ಧಿಗೊಳ್ಳುವುದರಿಂದ ಕೃಷಿ ಚಟುವಟಿಕೆ ಮರು ಜೀವ ಪಡೆದುಕೊಳ್ಳುತ್ತದೆ ಎಂದು ಹೇಳಿದರು . 

ರಾಜಕೀಯ ಉದ್ದೇಶದಿಂದ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುತ್ತಿಲ್ಲ. ನೀರಿನಲ್ಲಿ ರಾಜಕೀಯ ಮಾಡಬೇಕಾದ ಅಗತ್ಯವೂ ಇಲ್ಲ .ನಾನೂ ಸಹ ಕೃಷಿಕನಾಗಿದ್ದು , ಕೃಷಿ ಉದ್ದೇಶಕ್ಕೆ ೧೮ ಕೊಳವೆ ಬಾವಿ ನಿರ್ಮಿಸಿ ನೀರಿನಿಂದ ವಂಚಿತನಾಗಿದ್ದೇನೆ . ಇಲ್ಲಿನ ಇದೇ ಪರಿಸ್ಥಿತಿಯಾಗಿದೆ ಎಂದು ಹೇಳಿದರು . 

ತಹಶೀಲ್ದಾರ್ ಎಸ್.ಎಂ. ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ,  ಹಿರಿಯ ಸಹಾಯಕ ಕೃಷಿ ನಿರ್ದೇಶಕ ಎಂ. ಶ್ರೀನಿವಾಸ್ , ಪೊಲೀಸ್ ಇನ್ಸ್ ಪೆಕರ್ ಸಿ.ರವಿ ಕುಮಾರ್ , ಮುಖಂಡರಾದ ಕೆ.ಮಂಜುನಾಥರೆಡ್ಡಿ , ಮುನಿವೆಂಕಟಪ್ಪ , ರಾಮಕೃಷ್ಣಾರೆಡ್ಡಿ , ವೆಂಕಟರೆಡ್ಡಿ , ವೇಣುಗೋಪಾಲ್ , ಹರೀಶ್ ಯಾದವ್ ,  ರೈತರದ್ದು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು