4:17 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ರಾಜಣ್ಣ ನನ್ನ ಪಿಎ ಅಲ್ಲ, ಗೊತ್ತಿರುವ ಹುಡ್ಗ ಅಷ್ಟೇ, ತನಿಖೆ ನಡೆಯುತ್ತಿರುವುದರಿಂದ ಪ್ರಕರಣ ಕುರಿತು ಪ್ರತಿಕ್ರಿಯಿಸಲಾರೆ: ಸಚಿವ ಶ್ರೀರಾಮುಲು

02/07/2021, 18:59

ಬೆಂಗಳೂರು(reporterkarnataka news): ರಾಜಣ್ಣ ನನ್ನ ಪಿಎ ಅಲ್ಲ, ನಂಗೆ ಗೊತ್ತಿರುವ ಹುಡ್ಗ. ನನ್ನ ಪರಿಚಯಸ್ಥ ಅಷ್ಟೇ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ.

ರಾಜಕಾರಣಿಗಳ ಬಳಿಗೆ ಸಾಕಷ್ಟು ಜನರು ಬರುತ್ತಾರೆ. ರಾಜಣ್ಣ ಕೂಡ ಅಷ್ಟೇ. ಆತ ನನ್ನ ಪಿಎಂ ಅಲ್ಲ. ತಪ್ಪಿತಸ್ಥರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಈಗ ತನಿಖೆ ನಡೆಯುತ್ತಿರುವುದರಿಂದ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಲಾರೆ ಎಂದು ಮಾಧ್ಯಮದ ಜತೆ ಮಾತಾಡಿದ ಸಚಿವರು ನುಡಿದರು.

ನೌಕರಿ ಕೊಡಿಸುವ, ವರ್ಗಾವಣೆ ಮಾಡಿಸುವ ನೆಪ ಹೇಳಿ ಕೋಟ್ಯಂತರ ರೂ. ವಂಚಿಸಿದ ಆರೋಪದ ಮೇಲೆ ರಾಜಣ್ಣ ಬಂಧನ ನಡೆದಿತ್ತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ. ವೈ. ವಿಜಯೇಂದ್ರ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಂಧನ ನಡೆದಿದೆ. ರಾಜಣ್ಣ ಅವರನ್ನು ಬೆಂಗಳೂರನಲ್ಲಿ ಸಚಿವ ಶ್ರೀರಾಮುಲು ಮನೆಯಿಂದ ಸಿಸಿಬಿ ತಂಡ ಬಂಧಿಸಿತ್ತು.

ರಾಜಣ್ಣ ಸಚಿವ ಶ್ರೀರಾಮುಲು ಜತೆಗೆ ವಿಜಯೇಂದ್ರ ಅವರ ಹೆಸರನ್ನು ಕೂಡ ದುರ್ಬಳಕೆ ಮಾಡುತ್ತಿದ್ದರು ಎಂಬ ದೂರಿನ ಹಿನ್ನೆಲೆಯಲ್ಲಿ ದಸ್ತಗಿರಿ ಮಾಡಲಾಗಿತ್ತು. ರಾಜಣ್ಣ ನೌಕರಿ ಹಾಗೂ ಅಧಿಕಾರಿಗಳಿಗೆ ವರ್ಗಾವಣೆ ಆಮಿಷಯೊಡ್ಡಿ ಕೋಟ್ಯಂತರ ಹಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಎರಡು ದಿನಗಳ ಹಿಂದೆ ರಾಜಣ್ಣ ವಿರುದ್ಧ ಎಫ್‌ಐಆರ್​ ದಾಖಲಾಗಿತ್ತು. ಗುರುವಾರ ಬೆಳಗ್ಗೆಯಿಂದ  ಸಿಸಿಬಿ ಪೊಲೀಸರು ಹೊಂಚು ಹಾಕಿ ಇಂದು ರಾಜಣ್ಣ ಅವರನ್ನು ಬಂಧಿಸಿದ್ದರು.

ರಾಜಣ್ಣ ಅವರು ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಹೆಸರಲ್ಲಿಯೂ ಕೂಡ ವಂಚನೆ ಮಾಡಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಖುದ್ದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ರಾಮುಲು ಪಿಎ ವಿರುದ್ಧ ದೂರು ನೀಡಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು