9:30 AM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ರಾಜಣ್ಣ ನನ್ನ ಪಿಎ ಅಲ್ಲ, ಗೊತ್ತಿರುವ ಹುಡ್ಗ ಅಷ್ಟೇ, ತನಿಖೆ ನಡೆಯುತ್ತಿರುವುದರಿಂದ ಪ್ರಕರಣ ಕುರಿತು ಪ್ರತಿಕ್ರಿಯಿಸಲಾರೆ: ಸಚಿವ ಶ್ರೀರಾಮುಲು

02/07/2021, 18:59

ಬೆಂಗಳೂರು(reporterkarnataka news): ರಾಜಣ್ಣ ನನ್ನ ಪಿಎ ಅಲ್ಲ, ನಂಗೆ ಗೊತ್ತಿರುವ ಹುಡ್ಗ. ನನ್ನ ಪರಿಚಯಸ್ಥ ಅಷ್ಟೇ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ.

ರಾಜಕಾರಣಿಗಳ ಬಳಿಗೆ ಸಾಕಷ್ಟು ಜನರು ಬರುತ್ತಾರೆ. ರಾಜಣ್ಣ ಕೂಡ ಅಷ್ಟೇ. ಆತ ನನ್ನ ಪಿಎಂ ಅಲ್ಲ. ತಪ್ಪಿತಸ್ಥರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಈಗ ತನಿಖೆ ನಡೆಯುತ್ತಿರುವುದರಿಂದ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಲಾರೆ ಎಂದು ಮಾಧ್ಯಮದ ಜತೆ ಮಾತಾಡಿದ ಸಚಿವರು ನುಡಿದರು.

ನೌಕರಿ ಕೊಡಿಸುವ, ವರ್ಗಾವಣೆ ಮಾಡಿಸುವ ನೆಪ ಹೇಳಿ ಕೋಟ್ಯಂತರ ರೂ. ವಂಚಿಸಿದ ಆರೋಪದ ಮೇಲೆ ರಾಜಣ್ಣ ಬಂಧನ ನಡೆದಿತ್ತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ. ವೈ. ವಿಜಯೇಂದ್ರ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಂಧನ ನಡೆದಿದೆ. ರಾಜಣ್ಣ ಅವರನ್ನು ಬೆಂಗಳೂರನಲ್ಲಿ ಸಚಿವ ಶ್ರೀರಾಮುಲು ಮನೆಯಿಂದ ಸಿಸಿಬಿ ತಂಡ ಬಂಧಿಸಿತ್ತು.

ರಾಜಣ್ಣ ಸಚಿವ ಶ್ರೀರಾಮುಲು ಜತೆಗೆ ವಿಜಯೇಂದ್ರ ಅವರ ಹೆಸರನ್ನು ಕೂಡ ದುರ್ಬಳಕೆ ಮಾಡುತ್ತಿದ್ದರು ಎಂಬ ದೂರಿನ ಹಿನ್ನೆಲೆಯಲ್ಲಿ ದಸ್ತಗಿರಿ ಮಾಡಲಾಗಿತ್ತು. ರಾಜಣ್ಣ ನೌಕರಿ ಹಾಗೂ ಅಧಿಕಾರಿಗಳಿಗೆ ವರ್ಗಾವಣೆ ಆಮಿಷಯೊಡ್ಡಿ ಕೋಟ್ಯಂತರ ಹಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಎರಡು ದಿನಗಳ ಹಿಂದೆ ರಾಜಣ್ಣ ವಿರುದ್ಧ ಎಫ್‌ಐಆರ್​ ದಾಖಲಾಗಿತ್ತು. ಗುರುವಾರ ಬೆಳಗ್ಗೆಯಿಂದ  ಸಿಸಿಬಿ ಪೊಲೀಸರು ಹೊಂಚು ಹಾಕಿ ಇಂದು ರಾಜಣ್ಣ ಅವರನ್ನು ಬಂಧಿಸಿದ್ದರು.

ರಾಜಣ್ಣ ಅವರು ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಹೆಸರಲ್ಲಿಯೂ ಕೂಡ ವಂಚನೆ ಮಾಡಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಖುದ್ದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ರಾಮುಲು ಪಿಎ ವಿರುದ್ಧ ದೂರು ನೀಡಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು