7:16 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

Rajarajeshwari Temple | ಏ.6ರಂದು ಅಮ್ಮನೆಡೆಗೆ ನಮ್ಮ ನಡಿಗೆ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಪಾದಯಾತ್ರೆ

02/04/2025, 22:46

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ 5ನೇ ವರ್ಷದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಪಾದಯಾತ್ರೆ ಏಪ್ರಿಲ್‌ 6ರಂದು ಬೆಳಿಗ್ಗೆ 5.30ಕ್ಕೆ‌ ಏಕಕಾಲದಲ್ಲಿ ಬಿ.ಸಿ. ರೋಡಿನ ಕೈಕಂಬ ಪೊಳಲಿ ದ್ವಾರದಿಂದ ಮತ್ತು ಗುರುಪುರ ಕೈಕಂಬದಿಂದ ಆರಂಭಗೊಂಡು 9 ಗಂಟೆಗೆ ಪೊಳಲಿಯಲ್ಲಿ ಸಂಗಮವಾಗಲಿದೆ ಎಂದು ವಿಹಿಪ ಬಂಟ್ವಾಳ ಪ್ರಖಂಡ ಅಧ್ಯಕ್ಷ, ನ್ಯಾಯವಾದಿ ಪ್ರಸಾದ ಕುಮಾರ್ ರೈ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಟ್ವಾಳ ಶ್ರೀ ರಾಜರಾಜೇಶ್ವರಿ ದೇಗುಲವು ಇತಿಹಾಸ ಪ್ರಸಿದ್ಧ ದೇವಾಲಯವಾಗಿದೆ. ಎ ಗ್ರೇಡ್ ಮಾನ್ಯತೆ ಹೊಂದಿದೆ. ವಾರ್ಷಿಕ ವಾಗಿ ಸುಮಾರು ರೂ.8 ಕೋಟಿಗಳಷ್ಟು ಆದಾಯವಿದೆ. ದೇವಸ್ಥಾನದ ಆದಾಯವು ದೇವಾಲಯದ ಭಕ್ತ ಜನರಿಗೆ ವಿನಿಯೋಗವಾಗಬೇಕು ಎಂಬ ಬೇಡಿಕೆಯ ಮನವಿಯನ್ನು ದೇವಾಲಯದ ಆಡಳಿತ ಮಂಡಳಿಗೆ ಸಲ್ಲಿಸಲಾಗುವುದು ಎಂದು ಹೇಳಿದರು.
ದೇವಾಲಯಕ್ಕೆ ಬರುವ ಭಕ್ತರಿಗೆ ಹಿಂದು ಸಂಸ್ಕೃತಿಗೆ ಪೂರಕವಾದ ವಸ್ತ್ರ ಸಂಹಿತೆ ಕಟ್ಟುನಿಟ್ಟಾಗಿ ಪಾಲನೆಯಾಗಬೇಕು. ಸುಸಜ್ಜಿತ ಗೋಶಾಲೆ ನಿರ್ಮಾಣ ಮತ್ತು ನಿರ್ವಹಣೆ ಮಾಡಬೇಕು. ಬಾಲಸಂಸ್ಕಾರ ಕೇಂದ್ರ ತೆರೆದು ಧಾರ್ಮಿಕ ಶಿಕ್ಶಣ ನೀಡುವ ವ್ಯವಸ್ಥೆ ಮಾಡಬೇಕು.ಉಚಿತ ಸಾಮೂಹಿಕ ವಿವಾಹ, ಉತ್ಸವಗಳ ಸಂದರ್ಭದಲ್ಲಿ ರಾತ್ರಿ ಭೋಜನ ವ್ಯವಸ್ಥೆ ಮಾಡಬೇಕು. ದೇವಸ್ಥಾನದ ಪರಿಸರದಲ್ಲಿ ವ್ಯಾಪಾರ ಇತ್ಯಾದಿಗಳಿಗೆ ಅನ್ಯಮತೀಯರಿಗೆ ಅವಕಾಶ ನೀಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.
ವಿಹಿಪಂ, ಭಜರಂಗ ದಳ ಪದಾಧಿಕಾರಿಗಳಾದ ಕ.ಕೃಷ್ಣಪ್ಪ, ಭರತ್ ಕುಮ್ಡೇಲು, ರಾಜೇಶ ಗಂಜಿಮಠ, ಸಂತೋಷ ಸರಪಾಡಿ, ಕೇಶವ ದೈಪಲ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು