12:08 AM Sunday28 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ರಾಜಶ್ರೀ ಜೆ.ಪೂಜಾರಿಗೆ ಯುವಸಾಹಿತಿ ಪ್ರಶಸ್ತಿ

13/11/2024, 10:50

ಮಂಗಳೂರು:(Reporterkarnataka.com):ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ ಪಣಂಬೂರು- ಕುಳಾಯಿ ಘಟಕದ ಆತಿಥ್ಯದಲ್ಲಿ ಉರ್ವಸ್ಟೋರ್‌ನ ತುಳುಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ಭಾನುವಾರ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉದಯೋನ್ಮುಖ ಬರಹಗಾರ್ತಿ ರಾಜಶ್ರೀ ಜೆ.ಪೂಜಾರಿ ಅವರಿಗೆ ಪ್ರಭಾಕರ್ ನೀರುಮಾರ್ಗ ಯುವವಾಹಿನಿ ಯುವಸಾಹಿತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ.ಪೂಜಾರಿ, ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ., ಯುವವಾಹಿನಿ ಪಣಂಬೂರು- ಕುಳಾಯಿ ಘಟಕದ ಅಧ್ಯಕ್ಷೆ ಮನೀಷಾ ರೂಪೇಶ್, ಕಾರ್ಯದರ್ಶಿ ಸಚಿನ್ ಜಿ.ಅಮೀನ್, ವಿಶುಕುಮಾರ್ ದತ್ತಿನಿಧಿ ಸಮಿತಿ ಸಂಚಾಲಕ ಸುರೇಶ್ ಪೂಜಾರಿ, ಕಾರ್ಯದರ್ಶಿ ಸಚ್ಚೇಂದ್ರ ಅಂಬಾಗಿಲು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು