9:56 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಕಳವಳಕಾರಿ: ಶಾಸಕ ಡಾ.ಭರತ್ ಶೆಟ್ಟಿ

08/12/2024, 19:10

ಸುರತ್ಕಲ್(reporterkarnataka.com): ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನಿಂದ ಆರೋಗ್ಯ ಸಂಬಂಧ ರಾಜ್ಯದ ಜನತೆಯಲ್ಲಿ ಸರಕಾರಿ ಆಸ್ಪತ್ರೆಯೆಂದರೆ ಭಯ ಆರಂಭವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದ್ದಾರೆ.
ಬಳ್ಳಾರಿಯಲ್ಲಿ ನಡೆದ ಸಾವಿನ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ.ಬಾಣಂತಿಯರಿಗೆ ನೀಡಿದ ಮದ್ದು ಕಳಪೆಯಾಗಿದ್ದು ಆರೋಗ್ಯ ಇಲಾಖೆ ಖರೀದಿಯಲ್ಲೂ ಯಾಕೆ ಎಚ್ಚರ ವಹಿಸಿಲ್ಲ. ಸರಕಾರ ಸಂತ್ರಸ್ಥ ಕುಟುಂಬಕ್ಕೆ ಪರಿಹಾರ ನೀಡಿದ ಮಾತ್ರಕ್ಕೆ ಸಮಸ್ಯೆ ಬಗೆ ಹರಿಯಲಾರದು. ,ಭವಿಷ್ಯದಲ್ಲಿ ಇಂತಹ ಘಟನೆ ನಡೆಯದಂತೆ ಔಷಧಿ ಖರೀದಿಯಲ್ಲಿ ಸೂಕ್ತ ಕ್ರಮ ವಹಿಸಬೇಕು ಶಾಸಕರಾದ ಡಾ.ಭರತ್ವ ಶೆಟ್ಟಿ ವೈ ಒತ್ತಾಯಿಸಿದ್ದಾರೆ.
ಇಎಸ್‌ಐ ವಿಮಾ ವಿಚಾರದಲ್ಲೂ ರಾಜ್ಯದಲ್ಲಿ ಆಸ್ಪತ್ರೆಗಳ ನವೀಕರಣ ಕುರಿತಂತೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಲಕ್ಷಾಂತರ ಬಡ ರೋಗಿಗಳು ದುಬಾರಿ ಹಣ ತೆತ್ತು ಚಿಕಿತ್ಸೆ ಮಾಡಿಕೊಳ್ಳುವಂತಾಗಿದೆ. ಕೇಂದ್ರದ ಸೌಲಭ್ಯವನ್ನು ಜನರಿಗೆ ಮುಟ್ಟಿಸುವಲ್ಲಿ ರಾಜ್ಯ ಸರಕಾರ ಎಡವುತ್ತಿದೆ ಎಂದು ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು