6:49 AM Thursday10 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:… ಕೊಲೆ ಪ್ರಕರಣ: ಯೆಮೆನ್‌ನಲ್ಲಿ ಮರಣ ದಂಡನೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾಗೆ ಜುಲೈ… ನಂಜ ಈ ಪಣಿ ಮಾಡಿತಾಮಿ ಸಾರೂ: ವಿರಾಜಪೇಟೆ ಶಾಸಕರ ಮುಂದೆ ಕೆದರಿದ ಕೂದಲಿನ,… ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಭಾರೀ ಇಳಿಕೆ ಕಂಡ ಕೊರೊನಾ ಪ್ರಕರಣ: 278 ಪಾಸಿಟಿವ್ ಕೇಸ್ ಪತ್ತೆ; 3 ಜನ ಸಾವು

06/03/2022, 08:29

ಬೆಂಗಳೂರು(reporterkarnataka.com): ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಹಾಗೂ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಇಂದು, ಶನಿವಾರ ಹೊಸದಾಗಿ 278 ಸೋಂಕು ದಾಖಲಾಗಿದ್ದು, ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 458 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 3,286ಕ್ಕೆ ಇಳಿಕೆಯಾಗಿದೆ ರಾಜ್ಯದ ಸಕಾರಾತ್ಮಕತೆ ದರ 0.53% ಮತ್ತು ಮರಣ ಪ್ರಮಾಣ 1.07%ಗೆ ಕುಸಿದಿದೆ.

ಬೆಂಗಳೂರು ನಗರದಲ್ಲಿ ಹೊಸದಾಗಿ 182 ಕೊರೊನಾ ಸೋಂಕು ದಾಖಲಾಗಿದೆ ಹಾಗೂ ಒಬ್ಬರು ಮೃತಪಟ್ಟಿದ್ದಾರೆ. 2,419 ಸಕ್ರಿಯ ಪ್ರಕರಣಗಳಿವೆ. 8 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

ಜಿಲ್ಲಾವಾರು ಸೋಂಕಿನ ಮಾಹಿತಿ:

ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 182, ಬೀದರ್ 3, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 2, ದಕ್ಷಿಣ ಕನ್ನಡ 5, ದಾವಣಗೆರೆ 0, ಧಾರವಾಡ 6, ಗದಗ 0, ಹಾಸನ 4, ಹಾವೇರಿ 4, ಕಲಬುರಗಿ 8, ಕೊಡಗು 7, ಕೋಲಾರ 4, ಕೊಪ್ಪಳ 1, ಮಂಡ್ಯ 0, ಮೈಸೂರು 12, ರಾಯಚೂರು 0, ರಾಮನಗರ 0, ಶಿವಮೊಗ್ಗ 14, ತುಮಕೂರು 5, ಉಡುಪಿ 4, ಉತ್ತರ ಕನ್ನಡ 4, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 1 ಕೊರೊನಾ ಸೋಂಕು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು