10:56 PM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿಗೆ ಭಾರಿ ಸರ್ಜರಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಉಡುಪಿಯ ನಯನಾ ಗಣೇಶ್ ಉಪಾಧ್ಯಕ್ಷರು

27/12/2021, 09:11

ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, ಲಕ್ಷ್ಮಣ ಸವದಿ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.

ಈ ವೇಳೆ ವಿವಿಧ ಪ್ರಕೋಷ್ಠಗಳಿಗೆ ಸಂಚಾಲಕರು ಮತ್ತು ವಿವಿಧ ಜಿಲ್ಲೆಗಳಿಗೆ ಪ್ರಭಾರಿಗಳನ್ನು ನೇಮಕ ಮಾಡಲಾಗಿದೆ.

ಲಕ್ಷ್ಮಣ ಸವದಿ ಜೊತೆಗೆ ಉಡುಪಿಯ ನಯನಾ ಗಣೇಶ್ ಅವರಿಗೂ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ.

ಇನ್ನು ರಾಜ್ಯ ಮುಖ್ಯ ವಕ್ತಾರರಾಗಿದ್ದ ಕ್ಯಾ.ಗಣೇಶ್ ಕಾರ್ಣಿಕ್ ಅವರಿಗೆ ಅನಿವಾಸಿ ಭಾರತೀಯ ವಿಭಾಗದ ರಾಜ್ಯ ಸಂಚಾಲಕರ ಹುದ್ದೆ ನೀಡಲಾಗಿದೆ.

ಮೈಸೂರಿನ ಎಂ.ಜಿ ಗಣೇಶ್ ರಾಜ್ಯ ಮುಖ್ಯ ವಕ್ತಾರ, ಕೋಷ್ಠಗಳ ರಾಜ್ಯ ಸಹ ಸಂಯೋಜಕರಾಗಿ ಜಯತೀರ್ಥ ಕಟ್ಟಿ, ಕಾನೂನು ಪ್ರಕೋಷ್ಠ ರಾಜ್ಯ ಸಂಚಾಲಕರಾಗಿ ಎಚ್. ಯೋಗೇಂದ್ರ, ಸಹ ಸಂಚಾಲಕರಾಗಿ ವಿನೋದ್ ಪಾಟೀಲ್, ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಗೋವಿಂದ ಬಾಂಡೇಕರ್, ಸಹ ಸಂಚಾಲಕರಾಗಿ ನಾಗಪ್ಪ ಅಂಬಿ, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಬಸವರಾಜ ಮತ್ತಿಮೋಡ ಅವರನ್ನು ನೇಮಿಸಲಾಗಿದೆ.

ಮಂಡ್ಯ ಜಿಲ್ಲಾ ಪ್ರಭಾರಿಯಾಗಿ ಜಗದೀಶ್ ಹಿರೇಮನಿ, ಯಾದಗಿರಿ ಜಿಲ್ಲಾ ಪ್ರಭಾರಿಯಾಗಿ ಅಮರನಾಥ ಪಾಟೀಲ್, ದಾವಣಗೆರೆ ಜಿಲ್ಲಾ ಪ್ರಭಾರಿಯಾಗಿ ಶಿವಲಿಂಗಪ್ಪ, ಚಿತ್ರದುರ್ಗ ಜಿಲ್ಲಾ ಪ್ರಭಾರಿಯಾಗಿ ಪ್ರೇಮಕುಮಾರ್, ಬೆಂಗಳೂರು ಉತ್ತರ ಜಿಲ್ಲಾ ಪ್ರಭಾರಿಯಾಗಿ ಕೆವಿ ಶಿವಪ್ಪ, ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಮುರಹರಗೌಡ, ವಿಜಯನಗರ ಜಿಲ್ಲಾ ಅಧ್ಯಕ್ಷರಾಗಿ ಚನ್ನಬಸವನಗೌಡ ಅವರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು