1:43 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿಗೆ ಭಾರಿ ಸರ್ಜರಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಉಡುಪಿಯ ನಯನಾ ಗಣೇಶ್ ಉಪಾಧ್ಯಕ್ಷರು

27/12/2021, 09:11

ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, ಲಕ್ಷ್ಮಣ ಸವದಿ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.

ಈ ವೇಳೆ ವಿವಿಧ ಪ್ರಕೋಷ್ಠಗಳಿಗೆ ಸಂಚಾಲಕರು ಮತ್ತು ವಿವಿಧ ಜಿಲ್ಲೆಗಳಿಗೆ ಪ್ರಭಾರಿಗಳನ್ನು ನೇಮಕ ಮಾಡಲಾಗಿದೆ.

ಲಕ್ಷ್ಮಣ ಸವದಿ ಜೊತೆಗೆ ಉಡುಪಿಯ ನಯನಾ ಗಣೇಶ್ ಅವರಿಗೂ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ.

ಇನ್ನು ರಾಜ್ಯ ಮುಖ್ಯ ವಕ್ತಾರರಾಗಿದ್ದ ಕ್ಯಾ.ಗಣೇಶ್ ಕಾರ್ಣಿಕ್ ಅವರಿಗೆ ಅನಿವಾಸಿ ಭಾರತೀಯ ವಿಭಾಗದ ರಾಜ್ಯ ಸಂಚಾಲಕರ ಹುದ್ದೆ ನೀಡಲಾಗಿದೆ.

ಮೈಸೂರಿನ ಎಂ.ಜಿ ಗಣೇಶ್ ರಾಜ್ಯ ಮುಖ್ಯ ವಕ್ತಾರ, ಕೋಷ್ಠಗಳ ರಾಜ್ಯ ಸಹ ಸಂಯೋಜಕರಾಗಿ ಜಯತೀರ್ಥ ಕಟ್ಟಿ, ಕಾನೂನು ಪ್ರಕೋಷ್ಠ ರಾಜ್ಯ ಸಂಚಾಲಕರಾಗಿ ಎಚ್. ಯೋಗೇಂದ್ರ, ಸಹ ಸಂಚಾಲಕರಾಗಿ ವಿನೋದ್ ಪಾಟೀಲ್, ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಗೋವಿಂದ ಬಾಂಡೇಕರ್, ಸಹ ಸಂಚಾಲಕರಾಗಿ ನಾಗಪ್ಪ ಅಂಬಿ, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಬಸವರಾಜ ಮತ್ತಿಮೋಡ ಅವರನ್ನು ನೇಮಿಸಲಾಗಿದೆ.

ಮಂಡ್ಯ ಜಿಲ್ಲಾ ಪ್ರಭಾರಿಯಾಗಿ ಜಗದೀಶ್ ಹಿರೇಮನಿ, ಯಾದಗಿರಿ ಜಿಲ್ಲಾ ಪ್ರಭಾರಿಯಾಗಿ ಅಮರನಾಥ ಪಾಟೀಲ್, ದಾವಣಗೆರೆ ಜಿಲ್ಲಾ ಪ್ರಭಾರಿಯಾಗಿ ಶಿವಲಿಂಗಪ್ಪ, ಚಿತ್ರದುರ್ಗ ಜಿಲ್ಲಾ ಪ್ರಭಾರಿಯಾಗಿ ಪ್ರೇಮಕುಮಾರ್, ಬೆಂಗಳೂರು ಉತ್ತರ ಜಿಲ್ಲಾ ಪ್ರಭಾರಿಯಾಗಿ ಕೆವಿ ಶಿವಪ್ಪ, ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಮುರಹರಗೌಡ, ವಿಜಯನಗರ ಜಿಲ್ಲಾ ಅಧ್ಯಕ್ಷರಾಗಿ ಚನ್ನಬಸವನಗೌಡ ಅವರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು