2:29 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿಗೆ ಭಾರಿ ಸರ್ಜರಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಉಡುಪಿಯ ನಯನಾ ಗಣೇಶ್ ಉಪಾಧ್ಯಕ್ಷರು

27/12/2021, 09:11

ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, ಲಕ್ಷ್ಮಣ ಸವದಿ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.

ಈ ವೇಳೆ ವಿವಿಧ ಪ್ರಕೋಷ್ಠಗಳಿಗೆ ಸಂಚಾಲಕರು ಮತ್ತು ವಿವಿಧ ಜಿಲ್ಲೆಗಳಿಗೆ ಪ್ರಭಾರಿಗಳನ್ನು ನೇಮಕ ಮಾಡಲಾಗಿದೆ.

ಲಕ್ಷ್ಮಣ ಸವದಿ ಜೊತೆಗೆ ಉಡುಪಿಯ ನಯನಾ ಗಣೇಶ್ ಅವರಿಗೂ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ.

ಇನ್ನು ರಾಜ್ಯ ಮುಖ್ಯ ವಕ್ತಾರರಾಗಿದ್ದ ಕ್ಯಾ.ಗಣೇಶ್ ಕಾರ್ಣಿಕ್ ಅವರಿಗೆ ಅನಿವಾಸಿ ಭಾರತೀಯ ವಿಭಾಗದ ರಾಜ್ಯ ಸಂಚಾಲಕರ ಹುದ್ದೆ ನೀಡಲಾಗಿದೆ.

ಮೈಸೂರಿನ ಎಂ.ಜಿ ಗಣೇಶ್ ರಾಜ್ಯ ಮುಖ್ಯ ವಕ್ತಾರ, ಕೋಷ್ಠಗಳ ರಾಜ್ಯ ಸಹ ಸಂಯೋಜಕರಾಗಿ ಜಯತೀರ್ಥ ಕಟ್ಟಿ, ಕಾನೂನು ಪ್ರಕೋಷ್ಠ ರಾಜ್ಯ ಸಂಚಾಲಕರಾಗಿ ಎಚ್. ಯೋಗೇಂದ್ರ, ಸಹ ಸಂಚಾಲಕರಾಗಿ ವಿನೋದ್ ಪಾಟೀಲ್, ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಗೋವಿಂದ ಬಾಂಡೇಕರ್, ಸಹ ಸಂಚಾಲಕರಾಗಿ ನಾಗಪ್ಪ ಅಂಬಿ, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಬಸವರಾಜ ಮತ್ತಿಮೋಡ ಅವರನ್ನು ನೇಮಿಸಲಾಗಿದೆ.

ಮಂಡ್ಯ ಜಿಲ್ಲಾ ಪ್ರಭಾರಿಯಾಗಿ ಜಗದೀಶ್ ಹಿರೇಮನಿ, ಯಾದಗಿರಿ ಜಿಲ್ಲಾ ಪ್ರಭಾರಿಯಾಗಿ ಅಮರನಾಥ ಪಾಟೀಲ್, ದಾವಣಗೆರೆ ಜಿಲ್ಲಾ ಪ್ರಭಾರಿಯಾಗಿ ಶಿವಲಿಂಗಪ್ಪ, ಚಿತ್ರದುರ್ಗ ಜಿಲ್ಲಾ ಪ್ರಭಾರಿಯಾಗಿ ಪ್ರೇಮಕುಮಾರ್, ಬೆಂಗಳೂರು ಉತ್ತರ ಜಿಲ್ಲಾ ಪ್ರಭಾರಿಯಾಗಿ ಕೆವಿ ಶಿವಪ್ಪ, ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಮುರಹರಗೌಡ, ವಿಜಯನಗರ ಜಿಲ್ಲಾ ಅಧ್ಯಕ್ಷರಾಗಿ ಚನ್ನಬಸವನಗೌಡ ಅವರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು