5:02 PM Saturday4 - April 2026
ಬ್ರೇಕಿಂಗ್ ನ್ಯೂಸ್
Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿಯಲ್ಲಿ ನಿಲ್ಲದ ಕದನ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ 20 ಸಾವಿರ ಕೋಟಿ ಟೆಂಡರ್ ಕಿಕ್ ಬ್ಯಾಕ್ ಆರೋಪ

17/06/2021, 19:28

ಬೆಂಗಳೂರು(reporterkarnataka news): ಬಿಜೆಪಿ ಉಸ್ತವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಿದರೂ ಪಕ್ಷದೊಳಗಿನ ಬಿಕ್ಕಟ್ಟು ಪರಿಹಾರಗೊಳ್ಳುವ ಲಕ್ಷಣ ಕಂಡು ಬರುತ್ತಿಲ್ಲ. ಅರುಣ್ ಸಿಂಗ್ ಒಂದು ಕಡೆ ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದರೆ, ಇನ್ನೊಂದು ಕಡೆ ಪಕ್ಷದ ಎಂಎಲ್ ಸಿ ಎಚ್. ವಿಶ್ವನಾಥ್ ಅವರು ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ 20 ಸಾವಿರ ಕೋಟಿ ಟೆಂಡರ್ ಕಿಕ್ ಬ್ಯಾಕ್ ಬಾಂಬ್ ಸಿಡಿಸಿದ್ದಾರೆ.

ಅರುಣ್ ಸಿಂಗ್ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಮುಂದಿನ ದಿನಗಳಲ್ಲಿ ಕೂಡ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ನಿನ್ನೆಯೇ ಸ್ಪಷ್ಟಪಡಿಸಿದ್ದರು. ಆದರೆ ಎಚ್. ವಿಶ್ವನಾಥ್ ಅವರು ನಾಯಕತ್ವ ಬದಲಾವಣೆಯಾಗಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸಿಎಂ ಪುತ್ರ ಎಲ್ಲ ಖಾತೆಗಳಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದಾರೆ. ನೀರಾವರಿ ಖಾತೆಯಲ್ಲೂ ಹಸ್ತಕ್ಷೇಪ ನಡೆಸಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ನಾಯಕತ್ವ ಬದಲಾವಣೆ ಮಾಡಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ಕೂಡ ಸಾಥ್ ನೀಡಿದ್ದಾರೆ. ಕೆಲವು ದಿನ ತಣ್ಣಗಾಗಿದ್ದ ಯೋಗೀಶ್ವರ್ ಅವರು ಮತ್ತೆ ಬಂಡಾಯದ ಬಾವುಟವನ್ನು ವಿಶ್ವನಾಥ ಜತೆ ಹಾರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು