1:10 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿಯಲ್ಲಿ ನಿಲ್ಲದ ಕದನ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ 20 ಸಾವಿರ ಕೋಟಿ ಟೆಂಡರ್ ಕಿಕ್ ಬ್ಯಾಕ್ ಆರೋಪ

17/06/2021, 19:28

ಬೆಂಗಳೂರು(reporterkarnataka news): ಬಿಜೆಪಿ ಉಸ್ತವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಿದರೂ ಪಕ್ಷದೊಳಗಿನ ಬಿಕ್ಕಟ್ಟು ಪರಿಹಾರಗೊಳ್ಳುವ ಲಕ್ಷಣ ಕಂಡು ಬರುತ್ತಿಲ್ಲ. ಅರುಣ್ ಸಿಂಗ್ ಒಂದು ಕಡೆ ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದರೆ, ಇನ್ನೊಂದು ಕಡೆ ಪಕ್ಷದ ಎಂಎಲ್ ಸಿ ಎಚ್. ವಿಶ್ವನಾಥ್ ಅವರು ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ 20 ಸಾವಿರ ಕೋಟಿ ಟೆಂಡರ್ ಕಿಕ್ ಬ್ಯಾಕ್ ಬಾಂಬ್ ಸಿಡಿಸಿದ್ದಾರೆ.

ಅರುಣ್ ಸಿಂಗ್ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಮುಂದಿನ ದಿನಗಳಲ್ಲಿ ಕೂಡ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ನಿನ್ನೆಯೇ ಸ್ಪಷ್ಟಪಡಿಸಿದ್ದರು. ಆದರೆ ಎಚ್. ವಿಶ್ವನಾಥ್ ಅವರು ನಾಯಕತ್ವ ಬದಲಾವಣೆಯಾಗಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸಿಎಂ ಪುತ್ರ ಎಲ್ಲ ಖಾತೆಗಳಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದಾರೆ. ನೀರಾವರಿ ಖಾತೆಯಲ್ಲೂ ಹಸ್ತಕ್ಷೇಪ ನಡೆಸಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ನಾಯಕತ್ವ ಬದಲಾವಣೆ ಮಾಡಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ಕೂಡ ಸಾಥ್ ನೀಡಿದ್ದಾರೆ. ಕೆಲವು ದಿನ ತಣ್ಣಗಾಗಿದ್ದ ಯೋಗೀಶ್ವರ್ ಅವರು ಮತ್ತೆ ಬಂಡಾಯದ ಬಾವುಟವನ್ನು ವಿಶ್ವನಾಥ ಜತೆ ಹಾರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು