9:55 PM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿಯಲ್ಲಿ ನಿಲ್ಲದ ಕದನ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ 20 ಸಾವಿರ ಕೋಟಿ ಟೆಂಡರ್ ಕಿಕ್ ಬ್ಯಾಕ್ ಆರೋಪ

17/06/2021, 19:28

ಬೆಂಗಳೂರು(reporterkarnataka news): ಬಿಜೆಪಿ ಉಸ್ತವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಿದರೂ ಪಕ್ಷದೊಳಗಿನ ಬಿಕ್ಕಟ್ಟು ಪರಿಹಾರಗೊಳ್ಳುವ ಲಕ್ಷಣ ಕಂಡು ಬರುತ್ತಿಲ್ಲ. ಅರುಣ್ ಸಿಂಗ್ ಒಂದು ಕಡೆ ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದರೆ, ಇನ್ನೊಂದು ಕಡೆ ಪಕ್ಷದ ಎಂಎಲ್ ಸಿ ಎಚ್. ವಿಶ್ವನಾಥ್ ಅವರು ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ 20 ಸಾವಿರ ಕೋಟಿ ಟೆಂಡರ್ ಕಿಕ್ ಬ್ಯಾಕ್ ಬಾಂಬ್ ಸಿಡಿಸಿದ್ದಾರೆ.

ಅರುಣ್ ಸಿಂಗ್ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಮುಂದಿನ ದಿನಗಳಲ್ಲಿ ಕೂಡ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ನಿನ್ನೆಯೇ ಸ್ಪಷ್ಟಪಡಿಸಿದ್ದರು. ಆದರೆ ಎಚ್. ವಿಶ್ವನಾಥ್ ಅವರು ನಾಯಕತ್ವ ಬದಲಾವಣೆಯಾಗಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸಿಎಂ ಪುತ್ರ ಎಲ್ಲ ಖಾತೆಗಳಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದಾರೆ. ನೀರಾವರಿ ಖಾತೆಯಲ್ಲೂ ಹಸ್ತಕ್ಷೇಪ ನಡೆಸಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ನಾಯಕತ್ವ ಬದಲಾವಣೆ ಮಾಡಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ಕೂಡ ಸಾಥ್ ನೀಡಿದ್ದಾರೆ. ಕೆಲವು ದಿನ ತಣ್ಣಗಾಗಿದ್ದ ಯೋಗೀಶ್ವರ್ ಅವರು ಮತ್ತೆ ಬಂಡಾಯದ ಬಾವುಟವನ್ನು ವಿಶ್ವನಾಥ ಜತೆ ಹಾರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು