7:34 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಭಾರಿ ಮಳೆ: ಚಿಕ್ಕೋಡಿಯಲ್ಲಿ 7 ಸೇತುವೆ ಜಲಾವೃತ, ರಾಣಿಬೆನ್ನೂರಿನಲ್ಲಿ ಹೆದ್ದಾರಿ ಕುಸಿತ, ಕರಾವಳಿಯಲ್ಲಿ ತೋಟಕ್ಕೆ ನುಗ್ಗಿದ ನೀರು

19/06/2021, 15:00

ಬೆಳಗಾವಿ/ಮಂಗಳೂರು/ಹಾಸನ/ದಾವಣಗೆರೆ(reporterkarnataka news):  ರಾಜ್ಯದ ಬಹುತೇಕ ಕಡೆ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಒಂದೆಡೆ ಪ್ರವಾಹದ ಭೀತಿ ಎದುರಾದರೆ, ಇನ್ನೊಂದೆಡೆ ಭೂ ಕುಸಿತ ಉಂಟಾಗುತ್ತಿದೆ. ಭಾರಿ ವರ್ಷಧಾರೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. 


ಸತತ ಮಳೆಗೆ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಕರಾವಳಿ ಜಿಲ್ಲೆಗಳಲ್ಲಿ ಕೃಷಿಭೂಮಿ, ಗದ್ದೆ, ತೋಟಗಳಿಗೆ ನೆರೆ ನೀರು ನುಗ್ಗಿದೆ. ಕೆಲವು ಕಡೆಗಳಲ್ಲಿ ಮನೆಗಳಿಗೂ ನೀರು ನುಗ್ಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಾವಣಗೆರೆ ಸಮೀಪದ ರಾಣೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತವಾಗಿದ್ದು, ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 766ಸಿ ಯಲ್ಲಿ ರಸ್ತೆ ಕುಸಿತವುಂಟಾಗಿದ್ದು, ರಾಣೆಬೆನ್ನೂರು ಮಾರ್ಗದಿಂದ ಶಿಕಾರಿಪುರ, ಹೊಸನಗರ, ಬೈಂದೂರು ಮಾರ್ಗದ ಮೂಲಕ ಹೋಗುವ ವಾಹನಗಳಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಹೊಸನಗರ, ಮಾಸ್ತಿಕಟ್ಟೆ, ಸಿದ್ದಾಪುರ ಮಾರ್ಗವಾಗಿ ವಾಹನ ಸಂಚಾರಕ್ಕೆ ಸೂಚಿಸಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಪ್ರೇಮನಗರದಲ್ಲಿ ಭಾರಿ ಮಳೆಗೆ ತಡೆಗೋಡೆ ಸಮೇತ ರಸ್ತೆ ಕುಸಿದಿದೆ. ಇಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯವಸ್ತವಾಗಿದೆ. ರಸ್ತೆಯ ಒಂದು ಭಾಗ ಸಂಪೂರ್ಣ ಕುಸಿದಿದೆ. ಇದರಿಂದಾಗಿ ಸುತ್ತಮುತ್ತಲಿನ ಹತ್ತಾರು ಮನೆಗಳಿಗೂ ಆತಂಕ ಎದುರಾಗಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ  ಜಿಲ್ಲೆಗಳಲ್ಲಿ ಕಳೆದ ಐದು ದಿನಗಳಿಂದ ಎಡೆಬಿಡದೇ ಮಳೆಯಾಗುತ್ತಿದ್ದು, ಘಟಪ್ರಭಾ, ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಬೆಳಗಾವಿಯ ಚಿಕ್ಕೋಡಿಯ ವಿಭಾಗದ 7 ಸೇತುವೆಗಳು ಜಲಾವೃತಗೊಂಡಿವೆ. ಕಲ್ಲೋಳ ಗ್ರಾಮದ ದತ್ತ ದೇವಾಲಯ, ಬಂಗಾಲಿ ಬಾಬಾ ದೇವಸ್ಥಾನಗಳು ಜಲಾವೃತಗೊಂಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು