1:55 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ನಿಶ್ಚಿತ: ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ

13/12/2022, 16:23

ಮಂಗಳೂರು(reporterkarnataka.com): ರಾಜ್ಯದಲ್ಲಿ ಪಂಚ ರತ್ನ ರಥ ಯಾತ್ರೆಯ ಪೂರ್ವ ತಯಾರಿ ಯಾಗಿ ಮಂಗಳೂರು ದಕ್ಷಿಣ ವಿದಾನ ಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಪ್ರಚಾರ ಚಾಲನೆಯನ್ನು ಕದ್ರಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ನೀಡಿದರು.

2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ನಿಶ್ಚಿತ. ಅವರ ಜಲಧಾರೆ ಹಾಗೂ ಪಂಚ ರತ್ನ ಯೋಜನೆ ಈ ರಾಜ್ಯದ ನವ ನಿರ್ಮಾಣದ ಕಲ್ಪನೆ. ರಾಜ್ಯದ ಮೂಲೆ ಮೂಲೆಗಳಿಂದ ಸಂಪೂರ್ಣ ಬೆಂಬಲ ದೊರಕುತ್ತಿದು ವಿರೋಧ ಪಕ್ಷಗಳು ಭಯಬೀತರಾಗಿದಾರೆ ಎಂದು ಹೇಳಿದರು. ಹಾಗೂ ದಕ್ಷಿಣ ವಿದಾನ ಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಯಾಗಿ ಸುಮತಿ ಹೆಗ್ಡೆ ಎಂದು ಅಯ್ಕೆ ಮಾಡಲಾಗಿದೆ ಎಂದು ಹೇಳಿದರು.
ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಹಾಗೂ ನಿಯೋಜಿತ ಅಭ್ಯರ್ಥಿ ಸುಮತಿ ಹೆಗ್ಡೆ ಮಾತನಾಡಿ, ಕುಮಾರಸ್ವಾಮಿಯ ಆದೇಶದ ಮೇರೆಗೆ ಈ ಕಾರ್ಯಕ್ರಮ ಆಯೋಜಿಸಿದ್ದು, ವಿಧಾನಸಭಾ ಕ್ಷೇತ್ರದ 38 ವಾರ್ಡಗಳಲ್ಲಿ ಪ್ರಚಾರ ಜಾಥಾ ಸಂಚರಿಸಲಿದೆ. ಹಾಗೂ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಬೇಟಿ ನೀಡಲಿದೆ ಎಂದು ಹೇಳಿದರು.

ಜಿಲ್ಲಾ ವಕ್ತಾರ ಸುಶೀಲ್ ನೊರೊನ್ಹಾ ಮಾತನಾಡಿ, ಬಿಜೆಪಿ ಪಕ್ಷ ಜನರಲ್ಲಿ ಭಯ ಭೀತಿ ದ್ವೇಷ ಹಾಗೂ ಭ್ರಷ್ಟಾಚಾರ , ಬೆಲೆ ನಿಯಂತ್ರಣ ಮಾಡಲು ಸಂಪೂರ್ಣ ಸೋತಿದ್ದು ಇನೊಂದೆಡೆ ಕಾಂಗ್ರೆಸ್ ಅಧಿಕಾರ ಪಡೆದ ಹಾಗೆ ತಿರುಕನ ಕನಸು ಕಂಡಿದ್ದು ಮುಖ್ಯಮಂತ್ರಿ ಪೈಪೋಟಿಯಲ್ಲಿ ತೊಡಗಿದೆ. ಆದರೆ ಜೆಡಿಎಸ್ ಪಕ್ಷ ಜನ ಸಾಮಾನ್ಯರ ಕಷ್ಟ ಅರಿತುಕೊಳ್ಳಲು ಪಂಚ ರತ್ನ ಯೋಜನೆ ಮೂಲಕ ಜನರ ಜೊತೆಯಲ್ಲಿ ಮಗ್ನರಾಗಿದೆ ಎಂದು ಹೇಳಿದರು.

ರಾಜ್ಯ ಜೆಡಿಎಸ್ ನಾಯಕರಾದ ರತ್ನಾಕರ ಸುವರ್ಣ, ಜಮೀರ್ ಷಾ, ಇಕ್ಬಾಲ್ ಮುಲ್ಕಿ. ದಿನಕರ್ ಉಳ್ಳಾಲ್ ಕಡಬ ಕ್ಷೇತ್ರದ ಅಧ್ಯಕ್ಷ ಮೀರಾ ಸಾಹೇಬ್,ಯುವ ನಾಯಕ ಪೈಜಾಲ್ ಮುಂತಾದವರು ಮಾತನಾಡಿದರು. ಕನಕದಾಸ ಕುಳೂರ್, ಮುನೀರ್ ಮುಕ್ಕಚೇರಿ, ವಿನ್ಸೆಂಟ್ ಕೋಡಿಕಲ್, ಅಲ್ತಾಫ್ ತುಂಬೆ,ರವೀಂದ್ರ ಉಳ್ಳಾಲ ವೀಣಾ ಶೆಟ್ಟಿ, ಭಾರತೀ ಪುಷ್ಪರಾಜನ್, ಪ್ರಿಯಾ ಸಾಲಿಯಾನ್, ಶ್ರೀಮಣಿ, ಕವಿತಾ ಜೋಹರ್. ಬಸೀರ್ ಬೇಗಂ, ಲತೀಫ್ ವಳಚೀಲ್, ಎಚ್.ಕೆ.ಚಂದ್ರಶೇಖ ರ್ ಸುಮೀತ್ ಸುವರ್ಣ,ನಾಸಿರ್ ಬೆಂಗ್ರೆ, ರಾಶ್ ಬ್ಯಾರಿ, ನೀಲಂ, ಬಸವರಾಜ್, ಮನೋಜ್, ಜಾವೇದ್ ನಜೀರ್, ಯುವ ಜನತಾ ದಳ ವಿಧ್ಯಾರ್ಥಿ ಅಧ್ಯಕ್ಷ ಬಿಲಾಲ್,ಮಹಮದ್ ಉಪಸ್ಥಿತಿತರಿದರು. ಅಲ್ತಾಫ್ ತುಂಬೆ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು