7:36 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ರಾಜ್ಯದ ಲಾಕ್ ಡೌನ್ ಭವಿಷ್ಯ ಜೂನ್ 6ರಂದು ನಿರ್ಧಾರ?:ಲಾಕ್ ಬೇಡ ಎನ್ನುತ್ತಿದೆ ಆರ್ಥಿಕ ಇಲಾಖೆ, ಬೇಕು ಎನ್ನುತ್ತಿದೆ ತಜ್ಞರ ಸಮಿತಿ

01/06/2021, 14:37

ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಸುವಂತೆ ತಜ್ಞರ ಸಮಿತಿ ವರದಿ ನೀಡಿದೆ. ಈ ಮಧ್ಯೆ ರಾಜ್ಯದ ಹಣಕಾಸಿನ ದೃಷ್ಟಿಯಿಂದ ಲಾಕ್ ಡೌನ್ ತೆರವುಗೊಳಿಸುವಂತೆ ಆರ್ಥಿಕ ಇಲಾಖೆ ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ ಜೂನ್ 6ರಂದು ಲಾಕ್ ಡೌನ್ ಭವಿಷ್ಯ ನಿರ್ಧಾರವಾಗಲಿದೆ ಎಂದು ತಿಳಿದು ಬಂದಿದೆ.

ಸಾವು-ನೋವಿನ ಪ್ರಮಾಣ ಹೆಚ್ಚುತ್ತಲೇ ಇರುವ

ಕಾರಣ ಕೋವಿಡ್ ಪಾಸಿಟಿವಿಟಿ ರೇಟ್ ಶೇ. 5 ಕ್ಕಿಂತ ಕಡಿಮೆ ಹಾಗೂ ಸಾವಿನ ಪ್ರಮಾಣ ಶೇ. 1ಕ್ಕಿಂತ ಕಡಿಮೆಯಾಗುವರೆಗೂ ಲಾಕ್ ಡೌನ್ ಸೂಕ್ತ ಎಂದು ತಜ್ಞರ ಸಮಿತಿ ವರದಿಯಲ್ಲಿ ತಿಳಿಸಿದೆ.

 ರಾಜ್ಯ ಸರ್ಕಾರ ವಿಧಿಸಿರುವ ಲಾಕ್ ಡೌನ್ ಜೂನ್ 7 ಕ್ಕೆ ಕೊನೆಯಾಗಲಿದೆ. ಈ ನಿಟ್ಟಿನಲ್ಲಿ ಭಾನುವಾರ ಸಭೆ ನಡೆಸಿದ ತಜ್ಞರ ಸಮಿತಿ ಸೋಮವಾರ ಸರ್ಕಾರಕ್ಕೆ ಹಲವು ಅಂಶಗಳನ್ನು ಒಳಗೊಂಡ ವರದಿ ನೀಡಿತ್ತು. ಹೀಗಾಗಿ ಲಾಕ್ ಡೌನ್ ಭವಿಷ್ಯ ಸದ್ಯ ಸಿಎಂ ಯಡಿಯೂರಪ್ಪ ಅಂಗಳದಲ್ಲಿದ್ದು, ಜೂನ್ 6 ರಂದು ಸಭೆ ನಡೆಸಿ ಸಿಎಂ ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು