11:07 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ರಾಜ್ಯದ ಲಾಕ್ ಡೌನ್ ಭವಿಷ್ಯ ಜೂನ್ 6ರಂದು ನಿರ್ಧಾರ?:ಲಾಕ್ ಬೇಡ ಎನ್ನುತ್ತಿದೆ ಆರ್ಥಿಕ ಇಲಾಖೆ, ಬೇಕು ಎನ್ನುತ್ತಿದೆ ತಜ್ಞರ ಸಮಿತಿ

01/06/2021, 14:37

ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಸುವಂತೆ ತಜ್ಞರ ಸಮಿತಿ ವರದಿ ನೀಡಿದೆ. ಈ ಮಧ್ಯೆ ರಾಜ್ಯದ ಹಣಕಾಸಿನ ದೃಷ್ಟಿಯಿಂದ ಲಾಕ್ ಡೌನ್ ತೆರವುಗೊಳಿಸುವಂತೆ ಆರ್ಥಿಕ ಇಲಾಖೆ ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ ಜೂನ್ 6ರಂದು ಲಾಕ್ ಡೌನ್ ಭವಿಷ್ಯ ನಿರ್ಧಾರವಾಗಲಿದೆ ಎಂದು ತಿಳಿದು ಬಂದಿದೆ.

ಸಾವು-ನೋವಿನ ಪ್ರಮಾಣ ಹೆಚ್ಚುತ್ತಲೇ ಇರುವ

ಕಾರಣ ಕೋವಿಡ್ ಪಾಸಿಟಿವಿಟಿ ರೇಟ್ ಶೇ. 5 ಕ್ಕಿಂತ ಕಡಿಮೆ ಹಾಗೂ ಸಾವಿನ ಪ್ರಮಾಣ ಶೇ. 1ಕ್ಕಿಂತ ಕಡಿಮೆಯಾಗುವರೆಗೂ ಲಾಕ್ ಡೌನ್ ಸೂಕ್ತ ಎಂದು ತಜ್ಞರ ಸಮಿತಿ ವರದಿಯಲ್ಲಿ ತಿಳಿಸಿದೆ.

 ರಾಜ್ಯ ಸರ್ಕಾರ ವಿಧಿಸಿರುವ ಲಾಕ್ ಡೌನ್ ಜೂನ್ 7 ಕ್ಕೆ ಕೊನೆಯಾಗಲಿದೆ. ಈ ನಿಟ್ಟಿನಲ್ಲಿ ಭಾನುವಾರ ಸಭೆ ನಡೆಸಿದ ತಜ್ಞರ ಸಮಿತಿ ಸೋಮವಾರ ಸರ್ಕಾರಕ್ಕೆ ಹಲವು ಅಂಶಗಳನ್ನು ಒಳಗೊಂಡ ವರದಿ ನೀಡಿತ್ತು. ಹೀಗಾಗಿ ಲಾಕ್ ಡೌನ್ ಭವಿಷ್ಯ ಸದ್ಯ ಸಿಎಂ ಯಡಿಯೂರಪ್ಪ ಅಂಗಳದಲ್ಲಿದ್ದು, ಜೂನ್ 6 ರಂದು ಸಭೆ ನಡೆಸಿ ಸಿಎಂ ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು