9:13 AM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಕಲೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾರತಿ ಕುಲಕರ್ಣಿ ಆಯ್ಕೆ: ನಾಳೆ ಪುರಸ್ಕಾರ ಪ್ರದಾನ

05/03/2022, 10:36

ಕಾರವಾರ(reporterkarnataka.com):

ರಾಜ್ಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಜನಸ್ಪಂದನಾ ಟ್ರಸ್ಟ್ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಪ್ರಶಸ್ತಿಗೆ ಕಲಾ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಭಾರತಿ ಕುಲಕರ್ಣಿ ಆಯ್ಕೆಯಾಗಿದ್ದಾರೆ.

ಮಾರ್ಚ್ 6ರಂದು  ಭಾನುವಾರ ಬೆಂಗಳೂರಿನ ಬಾಗಲಗುಂಟೆಯ ಹೆಸರುಗಟ್ಟ ಮುಖ್ಯರಸ್ತೆಯಲ್ಲಿರುವ ಶ್ರೀ ಸಾಯಿ ಕಲ್ಯಾಣ ಮಂಟಪದಲ್ಲಿ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕರ್ನಾಟಕ ರಾಜ್ಯ ಜನಸ್ಪಂದನಾ ಟ್ರಸ್ಟ್ ನ 5ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟಿನ ಸಂಸ್ಥಾಪಕ ರಾಜ್ಯ ಅಧ್ಯಕ್ಷ ಹನುಮಂತಪ್ಪ ಮೇಡೆಗಾರ ತಿಳಿಸಿದ್ದಾರೆ. 

ಹಿಂದೆ ನಡೆಸಿದ 25 ವಾರಗಳ ವಿವಿಧ ಆನ್ಲೈನ್ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ಪ್ರತಿ ಸ್ಪರ್ಧೆಯಲ್ಲೂ ಪ್ರಥಮ, ದ್ವಿತೀಯ ಅಥವಾ ತೃತೀಯ ಬಹುಮಾನ ಪಡೆದ ಕಲಾಕುಸುಮಗಳಿಗೆ ಸನ್ಮಾನಿಸಿ ಅಭಿನಂದಿಸಿ ಗೌರವಿಸಲಾಗುವುದು. “ನೂಲಿನಂತೆ ಸೀರೆ ತಾಯಿಯಂತೆ ಮಗಳು” ಎಂಬ ಮಾತಿನಂತೆ ತಾಯಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿ ಸಾಧನೆಗೈದ್ದರೆ ಮಗಳು ಅನುರಾಧ ಕುಲಕರ್ಣಿ (8 ವರ್ಷ) 25 ವಾರಗಳ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಪ್ರಥಮ ದ್ವಿತೀಯ ತೃತೀಯ ಬಹುಮಾನ ಪಡೆದು ಗೌರವಕ್ಕೆ ಪಾತ್ರಳಾಗಿದ್ದಾಳೆ. ಈ ತಾಯಿ ಮಗಳಸಾಧನೆ ಮತ್ತು ಕೀರ್ತಿ ರಾಜ್ಯ, ರಾಷ್ಟ್ರ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಲಿ ಇನ್ನಷ್ಟು ಹೆಚ್ಚೆಚ್ಚು ಸಾಧನೆ ಮಾಡುವಂತಾಗಲಿ ಎಂದು ಟ್ರಸ್ಟಿನ ಪದಾಧಿಕಾರಿಗಳು, ಮೂರೂರು ಪ್ರಗತಿ ವಿದ್ಯಾಲಯದ ಆಡಳಿತಮಂಡಳಿಯವರು, ಮುಖ್ಯಾಧ್ಯಾಪಕರು ಹಾಗೂ ಸಂಪೂರ್ಣ ಶಿಕ್ಷಕ ವೃಂದ (ಸಹೋದ್ಯೋಗಿಗಳು), ಮಿತ್ರವೃಂದದವರು ಮತ್ತು ಬಂಧು-ಬಳಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು