1:25 AM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಕಲೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾರತಿ ಕುಲಕರ್ಣಿ ಆಯ್ಕೆ: ನಾಳೆ ಪುರಸ್ಕಾರ ಪ್ರದಾನ

05/03/2022, 10:36

ಕಾರವಾರ(reporterkarnataka.com):

ರಾಜ್ಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಜನಸ್ಪಂದನಾ ಟ್ರಸ್ಟ್ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಪ್ರಶಸ್ತಿಗೆ ಕಲಾ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಭಾರತಿ ಕುಲಕರ್ಣಿ ಆಯ್ಕೆಯಾಗಿದ್ದಾರೆ.

ಮಾರ್ಚ್ 6ರಂದು  ಭಾನುವಾರ ಬೆಂಗಳೂರಿನ ಬಾಗಲಗುಂಟೆಯ ಹೆಸರುಗಟ್ಟ ಮುಖ್ಯರಸ್ತೆಯಲ್ಲಿರುವ ಶ್ರೀ ಸಾಯಿ ಕಲ್ಯಾಣ ಮಂಟಪದಲ್ಲಿ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕರ್ನಾಟಕ ರಾಜ್ಯ ಜನಸ್ಪಂದನಾ ಟ್ರಸ್ಟ್ ನ 5ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟಿನ ಸಂಸ್ಥಾಪಕ ರಾಜ್ಯ ಅಧ್ಯಕ್ಷ ಹನುಮಂತಪ್ಪ ಮೇಡೆಗಾರ ತಿಳಿಸಿದ್ದಾರೆ. 

ಹಿಂದೆ ನಡೆಸಿದ 25 ವಾರಗಳ ವಿವಿಧ ಆನ್ಲೈನ್ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ಪ್ರತಿ ಸ್ಪರ್ಧೆಯಲ್ಲೂ ಪ್ರಥಮ, ದ್ವಿತೀಯ ಅಥವಾ ತೃತೀಯ ಬಹುಮಾನ ಪಡೆದ ಕಲಾಕುಸುಮಗಳಿಗೆ ಸನ್ಮಾನಿಸಿ ಅಭಿನಂದಿಸಿ ಗೌರವಿಸಲಾಗುವುದು. “ನೂಲಿನಂತೆ ಸೀರೆ ತಾಯಿಯಂತೆ ಮಗಳು” ಎಂಬ ಮಾತಿನಂತೆ ತಾಯಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿ ಸಾಧನೆಗೈದ್ದರೆ ಮಗಳು ಅನುರಾಧ ಕುಲಕರ್ಣಿ (8 ವರ್ಷ) 25 ವಾರಗಳ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಪ್ರಥಮ ದ್ವಿತೀಯ ತೃತೀಯ ಬಹುಮಾನ ಪಡೆದು ಗೌರವಕ್ಕೆ ಪಾತ್ರಳಾಗಿದ್ದಾಳೆ. ಈ ತಾಯಿ ಮಗಳಸಾಧನೆ ಮತ್ತು ಕೀರ್ತಿ ರಾಜ್ಯ, ರಾಷ್ಟ್ರ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಲಿ ಇನ್ನಷ್ಟು ಹೆಚ್ಚೆಚ್ಚು ಸಾಧನೆ ಮಾಡುವಂತಾಗಲಿ ಎಂದು ಟ್ರಸ್ಟಿನ ಪದಾಧಿಕಾರಿಗಳು, ಮೂರೂರು ಪ್ರಗತಿ ವಿದ್ಯಾಲಯದ ಆಡಳಿತಮಂಡಳಿಯವರು, ಮುಖ್ಯಾಧ್ಯಾಪಕರು ಹಾಗೂ ಸಂಪೂರ್ಣ ಶಿಕ್ಷಕ ವೃಂದ (ಸಹೋದ್ಯೋಗಿಗಳು), ಮಿತ್ರವೃಂದದವರು ಮತ್ತು ಬಂಧು-ಬಳಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು