7:24 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಕಲೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾರತಿ ಕುಲಕರ್ಣಿ ಆಯ್ಕೆ: ನಾಳೆ ಪುರಸ್ಕಾರ ಪ್ರದಾನ

05/03/2022, 10:36

ಕಾರವಾರ(reporterkarnataka.com):

ರಾಜ್ಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಜನಸ್ಪಂದನಾ ಟ್ರಸ್ಟ್ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಪ್ರಶಸ್ತಿಗೆ ಕಲಾ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಭಾರತಿ ಕುಲಕರ್ಣಿ ಆಯ್ಕೆಯಾಗಿದ್ದಾರೆ.

ಮಾರ್ಚ್ 6ರಂದು  ಭಾನುವಾರ ಬೆಂಗಳೂರಿನ ಬಾಗಲಗುಂಟೆಯ ಹೆಸರುಗಟ್ಟ ಮುಖ್ಯರಸ್ತೆಯಲ್ಲಿರುವ ಶ್ರೀ ಸಾಯಿ ಕಲ್ಯಾಣ ಮಂಟಪದಲ್ಲಿ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕರ್ನಾಟಕ ರಾಜ್ಯ ಜನಸ್ಪಂದನಾ ಟ್ರಸ್ಟ್ ನ 5ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟಿನ ಸಂಸ್ಥಾಪಕ ರಾಜ್ಯ ಅಧ್ಯಕ್ಷ ಹನುಮಂತಪ್ಪ ಮೇಡೆಗಾರ ತಿಳಿಸಿದ್ದಾರೆ. 

ಹಿಂದೆ ನಡೆಸಿದ 25 ವಾರಗಳ ವಿವಿಧ ಆನ್ಲೈನ್ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ಪ್ರತಿ ಸ್ಪರ್ಧೆಯಲ್ಲೂ ಪ್ರಥಮ, ದ್ವಿತೀಯ ಅಥವಾ ತೃತೀಯ ಬಹುಮಾನ ಪಡೆದ ಕಲಾಕುಸುಮಗಳಿಗೆ ಸನ್ಮಾನಿಸಿ ಅಭಿನಂದಿಸಿ ಗೌರವಿಸಲಾಗುವುದು. “ನೂಲಿನಂತೆ ಸೀರೆ ತಾಯಿಯಂತೆ ಮಗಳು” ಎಂಬ ಮಾತಿನಂತೆ ತಾಯಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿ ಸಾಧನೆಗೈದ್ದರೆ ಮಗಳು ಅನುರಾಧ ಕುಲಕರ್ಣಿ (8 ವರ್ಷ) 25 ವಾರಗಳ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಪ್ರಥಮ ದ್ವಿತೀಯ ತೃತೀಯ ಬಹುಮಾನ ಪಡೆದು ಗೌರವಕ್ಕೆ ಪಾತ್ರಳಾಗಿದ್ದಾಳೆ. ಈ ತಾಯಿ ಮಗಳಸಾಧನೆ ಮತ್ತು ಕೀರ್ತಿ ರಾಜ್ಯ, ರಾಷ್ಟ್ರ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಲಿ ಇನ್ನಷ್ಟು ಹೆಚ್ಚೆಚ್ಚು ಸಾಧನೆ ಮಾಡುವಂತಾಗಲಿ ಎಂದು ಟ್ರಸ್ಟಿನ ಪದಾಧಿಕಾರಿಗಳು, ಮೂರೂರು ಪ್ರಗತಿ ವಿದ್ಯಾಲಯದ ಆಡಳಿತಮಂಡಳಿಯವರು, ಮುಖ್ಯಾಧ್ಯಾಪಕರು ಹಾಗೂ ಸಂಪೂರ್ಣ ಶಿಕ್ಷಕ ವೃಂದ (ಸಹೋದ್ಯೋಗಿಗಳು), ಮಿತ್ರವೃಂದದವರು ಮತ್ತು ಬಂಧು-ಬಳಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು