2:05 AM Saturday16 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ಕಲೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾರತಿ ಕುಲಕರ್ಣಿ ಆಯ್ಕೆ: ನಾಳೆ ಪುರಸ್ಕಾರ ಪ್ರದಾನ

05/03/2022, 10:36

ಕಾರವಾರ(reporterkarnataka.com):

ರಾಜ್ಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಜನಸ್ಪಂದನಾ ಟ್ರಸ್ಟ್ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಪ್ರಶಸ್ತಿಗೆ ಕಲಾ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಭಾರತಿ ಕುಲಕರ್ಣಿ ಆಯ್ಕೆಯಾಗಿದ್ದಾರೆ.

ಮಾರ್ಚ್ 6ರಂದು  ಭಾನುವಾರ ಬೆಂಗಳೂರಿನ ಬಾಗಲಗುಂಟೆಯ ಹೆಸರುಗಟ್ಟ ಮುಖ್ಯರಸ್ತೆಯಲ್ಲಿರುವ ಶ್ರೀ ಸಾಯಿ ಕಲ್ಯಾಣ ಮಂಟಪದಲ್ಲಿ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕರ್ನಾಟಕ ರಾಜ್ಯ ಜನಸ್ಪಂದನಾ ಟ್ರಸ್ಟ್ ನ 5ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟಿನ ಸಂಸ್ಥಾಪಕ ರಾಜ್ಯ ಅಧ್ಯಕ್ಷ ಹನುಮಂತಪ್ಪ ಮೇಡೆಗಾರ ತಿಳಿಸಿದ್ದಾರೆ. 

ಹಿಂದೆ ನಡೆಸಿದ 25 ವಾರಗಳ ವಿವಿಧ ಆನ್ಲೈನ್ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ಪ್ರತಿ ಸ್ಪರ್ಧೆಯಲ್ಲೂ ಪ್ರಥಮ, ದ್ವಿತೀಯ ಅಥವಾ ತೃತೀಯ ಬಹುಮಾನ ಪಡೆದ ಕಲಾಕುಸುಮಗಳಿಗೆ ಸನ್ಮಾನಿಸಿ ಅಭಿನಂದಿಸಿ ಗೌರವಿಸಲಾಗುವುದು. “ನೂಲಿನಂತೆ ಸೀರೆ ತಾಯಿಯಂತೆ ಮಗಳು” ಎಂಬ ಮಾತಿನಂತೆ ತಾಯಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿ ಸಾಧನೆಗೈದ್ದರೆ ಮಗಳು ಅನುರಾಧ ಕುಲಕರ್ಣಿ (8 ವರ್ಷ) 25 ವಾರಗಳ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಪ್ರಥಮ ದ್ವಿತೀಯ ತೃತೀಯ ಬಹುಮಾನ ಪಡೆದು ಗೌರವಕ್ಕೆ ಪಾತ್ರಳಾಗಿದ್ದಾಳೆ. ಈ ತಾಯಿ ಮಗಳಸಾಧನೆ ಮತ್ತು ಕೀರ್ತಿ ರಾಜ್ಯ, ರಾಷ್ಟ್ರ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಲಿ ಇನ್ನಷ್ಟು ಹೆಚ್ಚೆಚ್ಚು ಸಾಧನೆ ಮಾಡುವಂತಾಗಲಿ ಎಂದು ಟ್ರಸ್ಟಿನ ಪದಾಧಿಕಾರಿಗಳು, ಮೂರೂರು ಪ್ರಗತಿ ವಿದ್ಯಾಲಯದ ಆಡಳಿತಮಂಡಳಿಯವರು, ಮುಖ್ಯಾಧ್ಯಾಪಕರು ಹಾಗೂ ಸಂಪೂರ್ಣ ಶಿಕ್ಷಕ ವೃಂದ (ಸಹೋದ್ಯೋಗಿಗಳು), ಮಿತ್ರವೃಂದದವರು ಮತ್ತು ಬಂಧು-ಬಳಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು