5:45 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ವಿಶ್ವದಲ್ಲಿ ನಾವು ಮೊದಲಿಗರಾಗಬೇಕಾದರೆ ವಿಜ್ಞಾನದಲ್ಲಿ ಪ್ರತಿದಿನವೂ ಅನ್ವೇಷಣೆ ಮಾಡಬೇಕು: ಡಾ.ಕೆ.ವಿ.ರಾವ್

25/11/2024, 19:21

ಮಂಗಳೂರು(reporterkarnataka.com): ವಿಶ್ವದಲ್ಲಿ ನಾವು ಮೊದಲಿಗರಾಗಬೇಕಾದರೆ ವಿಜ್ಞಾನದಲ್ಲಿ ಪ್ರತಿದಿನವೂ ಅನ್ವೇಷಣೆಯನ್ನು ಮಾಡಬೇಕು. ಇದಕ್ಕೋಸ್ಕರ ಸರ್ಕಾರ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ರಾಜ್ಯ ಮಟ್ಟದಲ್ಲಿ ಆಯೋಜಿಸುತ್ತಿದೆ ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ. ಕೆ. ವಿ ರಾವ್ ಹೇಳಿದರು.


ಅವರು ಶಿಕ್ಷಣ ಇಲಾಖೆ ವತಿಯಿಂದ, ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆ ಇದರ ಸಹಯೋಗದಲ್ಲಿ ನಡೆದ 2024-25ನೇ ಸಾಲಿನ ಪ್ರೌಢ ಶಾಲಾ ವಿಭಾಗದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಗತ್ತು ಆನ್‍ಲೈನ್ ಯುಗದಲ್ಲಿದೆ. ನಾವು ಅನ್ವೇಷಣೆ ಮಾಡುತ್ತಿದ್ದ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಎಲ್ಲವೂ ಕಂಪ್ಯೂಟರ್‍ನ ಚಿಪ್‍ನ ಮೂಲಕ ನಿಯಂತ್ರಿಸಲ್ಪಟ್ಟಿರುವ ಕಾಲಘಟ್ಟವಾಗಿದೆ. ನಾವು ಎಲ್ಲಾ ಅನ್ವೇಷಣೆಯನ್ನು ಮಾಡುವ ಸಂದರ್ಭದಲ್ಲಿ ಕಂಪ್ಯೂಟರಿನ ಭಾಷೆಯನ್ನು ಅರ್ಥಮಾಡಿಕೊಂಡು ಅಳವಡಿಸಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು.
ಇವತ್ತು ಮಗುವಿಗೆ ಮೊಬೈಲ್ ಕೊಟ್ಟಾಗ ಅದನ್ನು ಅರ್ಥಮಾಡಿಕೊಂಡು ಉಪಯೋಗಿಸುವ ಕಲೆಯನ್ನು ಮಗು ಹೊಂದಿದೆ. ಶಾಲೆಯ ಒಳಗಡೆ ಪಠ್ಯ ಕ್ರಮದ ಮೂಲಕ ಅಂಕ ಪಡೆಯುವುದರ ಜೊತೆಗೆ ವಿಜ್ಞಾನದ ಪ್ರಯೋಗವನ್ನು ಸಹ ಕಲಿಯಬೇಕು ಎಂದರು.
ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕ ವೆಂಕಟೇಶ್.ಎಸ್ ಪಟೇಗಾರ್ ಮಾತನಾಡಿ, ವಿಜ್ಞಾನ ಎಷ್ಟೇ ಮುಂದುವರಿದರೂ ನಮ್ಮ ಸುತ್ತಮುತ್ತಲಿನ ಪರಿಸರ ಮಾಲಿನ್ಯ ಇನ್ನೂ ಕಡಿಮೆಯಾಗಿಲ್ಲ, ಈ ನಿಟ್ಟಿನಲ್ಲಿ ಮುಂದಿನ ಪೀಳಿಗೆ ಯೋಚನೆ ಮಾಡಲೇಬೇಕಾಗಿದೆ ಎಂದು ಹೇಳಿದರು.
ಅಧ್ಯಕ್ಷತೆಯನ್ನು ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಡಾ. ಕೆ.ಸಿ ನಾಕ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ರಾಜ್ಯದ 35 ಶೈಕ್ಷಣಿಕ ಜಿಲ್ಲೆಯಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಪ್ರತಿ ಜಿಲ್ಲೆಯಿಂದ 6 ಮಂದಿಯಂತೆ ಒಟ್ಟು 210 ಸ್ಪರ್ಧಿಗಳು ಭಾಗವಹಿಸಿದರು. ವಿಶ್ವೇಶ್ವರಯ್ಯ ಮ್ಯೂಸಿಯಂ ಬೆಂಗಳೂರು, ಶಿಕ್ಷಣ ಸಹಾಯಕ ಹೇಮರಾಜ್ ಸ್ಪರ್ಧಾಳುಗಳಿಗೆ ವಿಜ್ಞಾನದ ಮಾದರಿಯ ತಯಾರಿಯ ಉಪಯುಕ್ತತೆಯ ಬಗ್ಗೆ ಮಾಹಿತಿ ನೀಡಿದರು.
ಮಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್ ಎಚ್. ಆರ್. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು, ಉಪನ್ಯಾಸಕ ಶ್ರೀನಿವಾಸ್ ಅಡಿಗ, ಶಕ್ತಿ ವಿದ್ಯಾ ಸಂಸ್ಥೆ, ಪ್ರಧಾನ ಸಲಹೆಗಾರ ರಮೇಶ್ ಕೆ, ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ಮೂರ್ತಿ ಉಪಸ್ಥಿತರಿದ್ದರು.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕಿ(ಅಭಿವೃದ್ಧಿ), ಪ್ರಾಂಶುಪಾಲ ರಾಜಲಕ್ಷ್ಮಿ .ಕೆ ಸ್ವಾಗತಿಸಿದರು. ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲ ಬಬಿತಾ ಸೂರಜ್ ವಂದಿಸಿದರು. ಶಿಕ್ಷಕಿ ಪ್ರೇಮಲತಾ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು