12:33 PM Thursday29 - January 2026
ಬ್ರೇಕಿಂಗ್ ನ್ಯೂಸ್
ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ

ಇತ್ತೀಚಿನ ಸುದ್ದಿ

ರಾಜ್ಯ ಮುಳುಗುತ್ತಿದ್ದರೆ ಸಿಎಂ ಖಾಸಗಿ ಕಾರ್ಯಕ್ರಮಗಳಲ್ಲಿ ಬ್ಯುಸಿ: ಕೆಪಿಸಿಸಿ ವಕ್ತಾರ ಕೆಂಗಲ್‌ ಶ್ರೀಪಾದ್‌ ರೇಣು ಟೀಕೆ

23/11/2021, 15:22

ಬೆಂಗಳೂರು(reporterkarnataka.com): ಅಕಾಲಿಕ ಮಳೆಯಿಂದಾಗಿ ರಾಜ್ಯದ ಹಾಗೂ ಬೆಂಗಳೂರು ನಗರದ ಜನರು ಪರಿತಪಿಸುತ್ತಿದ್ದರೆ ಜನರು ಹಾಗೂ ರೈತರ ಬಗ್ಗೆ ಯಾವುದೇ ಕಾಳಜಿ ತೋರಿಸದೇ ಇರುವ ಮುಖ್ಯಮಂತ್ರಿಗಳು ಕಾಮನ್‌ ಅಲ್ಲ ಕಾಸ್ಟ್ಲಿ ಮ್ಯಾನ್‌ ಎಂದು ಕೆಪಿಸಿಸಿ ವಕ್ತಾರ ಕೆಂಗಲ್ ಶ್ರೀಪಾದ ರೇಣು ಟೀಕಿಸಿದ್ದಾರೆ. 

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ಕಳೆದೊಂದು ವಾರದಿಂದ ರಾಜ್ಯದಲ್ಲಿ ಬಿಡದೆ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ರಾಜ್ಯದ ರೈತರು ತೀವ್ರ ತೊಂದರೆಗೀಡಾಗಿದ್ದಾರೆ. ಬೆಂಗಳೂರು ನಗರದಲ್ಲೂ ಹಲವಾರು ಪ್ರದೇಶಗಳು ಜಲಾವೃತವಾಗಿವೆ. ಇತರೆ ಮುಖ್ಯಮಂತ್ರಿಗಳು ಇಂತಹ ಸಂಧರ್ಭದಲ್ಲಿ ಮಳೆಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯದಲ್ಲಿ ತೊಡಗಿಕೊಂಡಿರುತ್ತಿದ್ದರು. ನವದೆಹಲಿಗೆ ತೆರಳುವ ಸಂಧರ್ಭದಲ್ಲಿ ಜನರ ತೆರಿಗೆ ಹಣದಲ್ಲಿ ವಿಶೇಷ ವಿಮಾನ ವ್ಯವಸ್ಥೆ ಮಾಕೊಳ್ಳುವ ಸಿಎಂ, ಕನಿಷ್ಠ ಹೆಲಿಕ್ಯಾಪ್ಟರ್‌ ನಲ್ಲಾದರೂ ಸಮೀಕ್ಷೆ ಮಾಡಬಹುದಿತ್ತು. ರೈತರ ಸಹಾಯಕ್ಕೆ ಧಾವಿಸುವ ಬದಲಾಗಿ ನಮ್ಮ ಮುಖ್ಯಮಂತ್ರಿಗಳು ಬೆಂಗಳೂರು ನಗರದಲ್ಲಿ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾಲಹರಣ ಮಾಡುತ್ತಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನಗರದ ಉಸ್ತುವಾರಿಯೂ ಆಗಿರುವ ಮುಖ್ಯಮಂತ್ರಿಗಳು ಇದುವರೆಗೆ ಒಂದೇ ಒಂದು ಬಾರಿ ಮಳೆಯಿಂದ ತೊಂದರೆಗೀಡಾದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇನ್ನು ಹೊಸಕೋಟೆ ಮತ್ತು ಚಿಕ್ಕಬಳ್ಳಾಪುರಕ್ಕೆ ಫ್ಲೈಯಿಂಗ್‌ ವಿಸಿಟ್‌ ಮಾಡಿದ್ದಾರೆ. ಇಂತಹ ಕಣ್ಣೊರೆಸುವ ತಂತ್ರಗಳನ್ನು ಬಿಟ್ಟು ಕಾಮನ್‌ ಮ್ಯಾನ್‌ ಗಿರುವ ಬದ್ದತೆಯನ್ನು ತೋರಿಸಬೇಕು ಎಂದು ಆಗ್ರಹಿಸಿದ್ದಾರೆ. 

ಜನಸಾಮಾನ್ಯರ ಮುಖ್ಯಮಂತ್ರಿ ನಾನು ಕಾಮನ್‌ ಮ್ಯಾನ್‌ ಎಂದು ತಮ್ಮ ಎದೆ ತಟ್ಟಿಕೊಂಡಿದ್ದ ಮುಖ್ಯಮಂತ್ರಿಗಳು ಬದ್ದತೆ ಕೇವಲ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದೋ ಎಂದು ಟೀಕಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು