9:23 PM Tuesday25 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ರಾಜ್ಯ ಮುಳುಗುತ್ತಿದ್ದರೆ ಸಿಎಂ ಖಾಸಗಿ ಕಾರ್ಯಕ್ರಮಗಳಲ್ಲಿ ಬ್ಯುಸಿ: ಕೆಪಿಸಿಸಿ ವಕ್ತಾರ ಕೆಂಗಲ್‌ ಶ್ರೀಪಾದ್‌ ರೇಣು ಟೀಕೆ

23/11/2021, 15:22

ಬೆಂಗಳೂರು(reporterkarnataka.com): ಅಕಾಲಿಕ ಮಳೆಯಿಂದಾಗಿ ರಾಜ್ಯದ ಹಾಗೂ ಬೆಂಗಳೂರು ನಗರದ ಜನರು ಪರಿತಪಿಸುತ್ತಿದ್ದರೆ ಜನರು ಹಾಗೂ ರೈತರ ಬಗ್ಗೆ ಯಾವುದೇ ಕಾಳಜಿ ತೋರಿಸದೇ ಇರುವ ಮುಖ್ಯಮಂತ್ರಿಗಳು ಕಾಮನ್‌ ಅಲ್ಲ ಕಾಸ್ಟ್ಲಿ ಮ್ಯಾನ್‌ ಎಂದು ಕೆಪಿಸಿಸಿ ವಕ್ತಾರ ಕೆಂಗಲ್ ಶ್ರೀಪಾದ ರೇಣು ಟೀಕಿಸಿದ್ದಾರೆ. 

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ಕಳೆದೊಂದು ವಾರದಿಂದ ರಾಜ್ಯದಲ್ಲಿ ಬಿಡದೆ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ರಾಜ್ಯದ ರೈತರು ತೀವ್ರ ತೊಂದರೆಗೀಡಾಗಿದ್ದಾರೆ. ಬೆಂಗಳೂರು ನಗರದಲ್ಲೂ ಹಲವಾರು ಪ್ರದೇಶಗಳು ಜಲಾವೃತವಾಗಿವೆ. ಇತರೆ ಮುಖ್ಯಮಂತ್ರಿಗಳು ಇಂತಹ ಸಂಧರ್ಭದಲ್ಲಿ ಮಳೆಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯದಲ್ಲಿ ತೊಡಗಿಕೊಂಡಿರುತ್ತಿದ್ದರು. ನವದೆಹಲಿಗೆ ತೆರಳುವ ಸಂಧರ್ಭದಲ್ಲಿ ಜನರ ತೆರಿಗೆ ಹಣದಲ್ಲಿ ವಿಶೇಷ ವಿಮಾನ ವ್ಯವಸ್ಥೆ ಮಾಕೊಳ್ಳುವ ಸಿಎಂ, ಕನಿಷ್ಠ ಹೆಲಿಕ್ಯಾಪ್ಟರ್‌ ನಲ್ಲಾದರೂ ಸಮೀಕ್ಷೆ ಮಾಡಬಹುದಿತ್ತು. ರೈತರ ಸಹಾಯಕ್ಕೆ ಧಾವಿಸುವ ಬದಲಾಗಿ ನಮ್ಮ ಮುಖ್ಯಮಂತ್ರಿಗಳು ಬೆಂಗಳೂರು ನಗರದಲ್ಲಿ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾಲಹರಣ ಮಾಡುತ್ತಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನಗರದ ಉಸ್ತುವಾರಿಯೂ ಆಗಿರುವ ಮುಖ್ಯಮಂತ್ರಿಗಳು ಇದುವರೆಗೆ ಒಂದೇ ಒಂದು ಬಾರಿ ಮಳೆಯಿಂದ ತೊಂದರೆಗೀಡಾದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇನ್ನು ಹೊಸಕೋಟೆ ಮತ್ತು ಚಿಕ್ಕಬಳ್ಳಾಪುರಕ್ಕೆ ಫ್ಲೈಯಿಂಗ್‌ ವಿಸಿಟ್‌ ಮಾಡಿದ್ದಾರೆ. ಇಂತಹ ಕಣ್ಣೊರೆಸುವ ತಂತ್ರಗಳನ್ನು ಬಿಟ್ಟು ಕಾಮನ್‌ ಮ್ಯಾನ್‌ ಗಿರುವ ಬದ್ದತೆಯನ್ನು ತೋರಿಸಬೇಕು ಎಂದು ಆಗ್ರಹಿಸಿದ್ದಾರೆ. 

ಜನಸಾಮಾನ್ಯರ ಮುಖ್ಯಮಂತ್ರಿ ನಾನು ಕಾಮನ್‌ ಮ್ಯಾನ್‌ ಎಂದು ತಮ್ಮ ಎದೆ ತಟ್ಟಿಕೊಂಡಿದ್ದ ಮುಖ್ಯಮಂತ್ರಿಗಳು ಬದ್ದತೆ ಕೇವಲ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದೋ ಎಂದು ಟೀಕಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು