6:53 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ರಾಜ್ಯ ನೂತನ ಮುಖ್ಯಮಂತ್ರಿ: ಶಾಸಕಾಂಗ ಸಭೆ ಬೆನ್ನಲ್ಲೇ ಇಂದು ರಾತ್ರಿ ಘೋಷಣೆ? ಯಾರು ಹೊಸ ಸಿಎಂ? 

27/07/2021, 17:50

ಬೆಂಗಳೂರು(reporterkarnataka news) ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧಿಸಿದಂತೆ ಇಂದು ರಾತ್ರಿ 7:30ಕ್ಕೆ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‌ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಅಲ್ಲಿ ನೂತನ ಮುಖ್ಯಮಂತ್ರಿಯ ಘೋಷಿಸುವ ಸಾಧ್ಯತೆಗಳಿವೆ.

ವೀಕ್ಷಕರಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಅವರು ಈಗಾಗಲೇ ಬೆಂಗಳೂರಿಗೆ ಆಗಮಿಸಲಿದ್ದು, ಎಲ್ಲಾ ಶಾಸಕರ ಅಭಿಪ್ರಾಯ ಪಡೆದ ಬಳಿಕ ನೂತನ ಸಿಎಂ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಿಜೆಪಿ ಹೈಕಮಾಂಡ್ ಈಗಾಗಲೇ ಮುಖ್ಯಮಂತ್ರಿ ಯಾರಾಗಬೇಕೆನ್ನುವುದನ್ನು ನಿರ್ಧರಿಸಿದ್ದು, ಶಾಸ್ತ್ರಕಷ್ಟೇ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ನಲ್ಲಿ ಶಾಸಕಾಂಗ ಸಭೆ ನಡೆಸಲಾಗುತ್ತದೆ ಎನ್ನಲಾಗಿದೆ. ಬಿಜೆಪಿ ಇರಲಿ, ಕಾಂಗ್ರೆಸ್ ಇರಲಿ ಹೈಕಮಾಂಡ್ ಸಂಸ್ಕೃತಿಯ ಪಕ್ಷಗಳು ಮೊದಲಿನಿಂದಲೂ ಹೇರುವ ಕ್ರಮವನ್ನೇ ಮಾಡಿಕೊಂಡು ಬಂದಿವೆ. ಹಿಂದೆ ಕಾಂಗ್ರೆಸ್ ಆಡಳಿತದಲ್ಲಿದ್ದಾಗಲೂ ದೆಹಲಿಯಿಂದ ಚೀಟಿ ಕಳುಹಿಸುವ ಮೂಲಕ ಮುಖ್ಯಮಂತ್ರಿಯ ಆಯ್ಕೆ ನಡೆಸಿತ್ತು. ವಿಶೇವೆಂದರೆ ಅಂದು ಕಾಂಗ್ರೆಸ್ ನ ಹೈಕಮಾಂಡ್ ಸಂಸ್ಕೃತಿಯನ್ನು ಟೀಕಿಸುತ್ತಿದ್ದ ಬಿಜೆಪಿ ಇದೀಗ ಕಾಂಗ್ರೆಸ್ ನ್ನು ಓವರ್ ಟೇಕ್ ಮಾಡಿದೆ. ಈ ನಡುವೆ ಹೊಸ ಸಿಎಂ ಯಾರೆಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಗ್ರಾಮ ಪಂಚಾಯಿತಿ ಚುನಾವಣೆಯನ್ನು ಎದುರಿಸದ ವ್ಯಕ್ತಿಯಿಂದ ಆರಂಭಗೊಂಡು ಕೇಂದ್ರ ಸಚಿವರ ವರೆಗೆ ಹೆಸರು ಕೇಳಿಬರುತ್ತಿದೆ. ಆದರೆ ಯಾರೆನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಯಾವುದಕ್ಕೂ ಸ್ವಲ್ಪ ಕಾದು ನೋಡೋಣ.

ಇತ್ತೀಚಿನ ಸುದ್ದಿ

ಜಾಹೀರಾತು