2:06 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ರಾಜ್ಯ ನೂತನ ಮುಖ್ಯಮಂತ್ರಿ: ಶಾಸಕಾಂಗ ಸಭೆ ಬೆನ್ನಲ್ಲೇ ಇಂದು ರಾತ್ರಿ ಘೋಷಣೆ? ಯಾರು ಹೊಸ ಸಿಎಂ? 

27/07/2021, 17:50

ಬೆಂಗಳೂರು(reporterkarnataka news) ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧಿಸಿದಂತೆ ಇಂದು ರಾತ್ರಿ 7:30ಕ್ಕೆ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‌ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಅಲ್ಲಿ ನೂತನ ಮುಖ್ಯಮಂತ್ರಿಯ ಘೋಷಿಸುವ ಸಾಧ್ಯತೆಗಳಿವೆ.

ವೀಕ್ಷಕರಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಅವರು ಈಗಾಗಲೇ ಬೆಂಗಳೂರಿಗೆ ಆಗಮಿಸಲಿದ್ದು, ಎಲ್ಲಾ ಶಾಸಕರ ಅಭಿಪ್ರಾಯ ಪಡೆದ ಬಳಿಕ ನೂತನ ಸಿಎಂ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಿಜೆಪಿ ಹೈಕಮಾಂಡ್ ಈಗಾಗಲೇ ಮುಖ್ಯಮಂತ್ರಿ ಯಾರಾಗಬೇಕೆನ್ನುವುದನ್ನು ನಿರ್ಧರಿಸಿದ್ದು, ಶಾಸ್ತ್ರಕಷ್ಟೇ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ನಲ್ಲಿ ಶಾಸಕಾಂಗ ಸಭೆ ನಡೆಸಲಾಗುತ್ತದೆ ಎನ್ನಲಾಗಿದೆ. ಬಿಜೆಪಿ ಇರಲಿ, ಕಾಂಗ್ರೆಸ್ ಇರಲಿ ಹೈಕಮಾಂಡ್ ಸಂಸ್ಕೃತಿಯ ಪಕ್ಷಗಳು ಮೊದಲಿನಿಂದಲೂ ಹೇರುವ ಕ್ರಮವನ್ನೇ ಮಾಡಿಕೊಂಡು ಬಂದಿವೆ. ಹಿಂದೆ ಕಾಂಗ್ರೆಸ್ ಆಡಳಿತದಲ್ಲಿದ್ದಾಗಲೂ ದೆಹಲಿಯಿಂದ ಚೀಟಿ ಕಳುಹಿಸುವ ಮೂಲಕ ಮುಖ್ಯಮಂತ್ರಿಯ ಆಯ್ಕೆ ನಡೆಸಿತ್ತು. ವಿಶೇವೆಂದರೆ ಅಂದು ಕಾಂಗ್ರೆಸ್ ನ ಹೈಕಮಾಂಡ್ ಸಂಸ್ಕೃತಿಯನ್ನು ಟೀಕಿಸುತ್ತಿದ್ದ ಬಿಜೆಪಿ ಇದೀಗ ಕಾಂಗ್ರೆಸ್ ನ್ನು ಓವರ್ ಟೇಕ್ ಮಾಡಿದೆ. ಈ ನಡುವೆ ಹೊಸ ಸಿಎಂ ಯಾರೆಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಗ್ರಾಮ ಪಂಚಾಯಿತಿ ಚುನಾವಣೆಯನ್ನು ಎದುರಿಸದ ವ್ಯಕ್ತಿಯಿಂದ ಆರಂಭಗೊಂಡು ಕೇಂದ್ರ ಸಚಿವರ ವರೆಗೆ ಹೆಸರು ಕೇಳಿಬರುತ್ತಿದೆ. ಆದರೆ ಯಾರೆನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಯಾವುದಕ್ಕೂ ಸ್ವಲ್ಪ ಕಾದು ನೋಡೋಣ.

ಇತ್ತೀಚಿನ ಸುದ್ದಿ

ಜಾಹೀರಾತು