6:04 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ರಾಜ್ಯ ಪತ್ರಕರ್ತರ ಸಂಘದಿಂದ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್: ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಾಳೆಯಿಂದ ಆರಂಭ

04/01/2024, 11:04

ಮಂಗಳೂರು(reporterkarnataka.com): ವೀರಯೋಧ ದಿ.ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಗೌರವಾರ್ಥ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ರಾಜ್ಯ ಮಟ್ಟದ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024 ಕ್ರಿಕೆಟ್ ಪಂದ್ಯಾಟ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಜ.5,6 ಮತ್ತು 7ರಂದು ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.
ಟೂರ್ನಮೆಂಟ್
ನಲ್ಲಿ ಒಟ್ಟು 24 ತಂಡಗಳು ಭಾಗವಹಿಸಲಿವೆ. ಜ.5ರಂದು ಬೆಳಗ್ಗೆ 10 ಗಂಟೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಕಾರಿ ಸಮಿತಿ ಸಭೆ ಮತ್ತು 11 ಗಂಟೆಗೆ ಕೆಯುಡಬ್ಲ್ಯಜೆ
90ನೇ ಸರ್ವ ಸದಸ್ಯರ ಮಹಾಸಭೆ ಸಹ್ಯಾದ್ರಿ ಕಾಲೇಜು ಆಡಿಟೋರಿಯಂನಲ್ಲಿ ನಡೆಯಲಿದೆ.
ಸಂಜೆ 4 ಗಂಟೆಗೆ ಸಹ್ಯಾದ್ರಿ ಸ್ವಾಗತ ದ್ವಾರದಿಂದ ಕ್ರೀಡಾಂಗಣಕ್ಕೆ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ನಾನಾ ಜಿಲ್ಲಾ ತಂಡಗಳ ಆಟಗಾರರು ತಮ್ಮ ಜಿಲ್ಲೆಯ ಸಾಂಪ್ರದಾಯಿಕ ಉಡುಗೆ-ತೊಡುಗೆಗಳನ್ನು ಧರಿಸಿ ಹೆಜ್ಜೆ ಇರಿಸಲಿದ್ದಾರೆ. ಸಂಜೆ 5 ಗಂಟೆಗೆ ರಾಜ್ಯ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಕ್ರಿಕೆಟ್
ಪಂದ್ಯಾವಳಿಗೆ ಚಾಲನೆ ನೀಡಲಿರುವರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಕ್ಯಾ.ಎಂ.ವಿ.ಪ್ರಾಂಜಲ್ ಗೌರವಾರ್ಥದ ಪೆವಿಲಿಯನ್ ಉದ್ಘಾಟಿಸುವರು.
ಸೌಹಾರ್ದದ ಪಂದ್ಯ: ಮೊದಲ ದಿನ ಎರಡು ತಂಡಗಳ ನಡುವೆ ಸೌಹಾರ್ದ ಪಂದ್ಯ ನಡೆಯಲಿದೆ. ಬಳಿಕ ನಾನಾ ಜಿಲ್ಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಎರಡು ದಿನಗಳ ಕಾಲ ಲೀಗ್ ಮಾದರಿಯಲ್ಲಿ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ.
ಸಮಾರೋಪ ಸಮಾರಂಭ: ಜ.7ರಂದು ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ಕ್ರೀಡಾ ಸಚಿವರ ನಾಗೇಂದ್ರ ಮತ್ತು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಬಹುಮಾನ ವಿತರಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದು, ನಾನಾ ಕ್ಷೇತ್ರದ ಗಣ್ಯರು ಉಪಸ್ಥಿತರಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು