4:46 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ರಾಜ್ಯ ಪೊಲೀಸ್ ಇಲಾಖೆ ಇತಿಹಾಸದಲ್ಲೇ ಮೊದಲ ಘಟನೆ: ಎಡಿಜಿಪಿ ಅಮೃತ್‌ ಪೌಲ್ ಬಂಧನ

04/07/2022, 20:21

ಬೆಂಗಳೂರು(reporterkarnataka.com): ರಾಜ್ಯದ ಪೊಲೀಸ್ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಎಡಿಜಿಪಿ ಬಂಧನವಾಗಿದೆ. ಪಿಎಸ್‌ಐ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್‌ ಪೌಲ್ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಡಿವೈಎಸ್‌ಪಿ ಹಾಗೂ ಎಫ್‌ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ. 545 ಪಿಎಸ್‌ಐ ಹುದ್ದೆಗಳ ನೇಮಕಾತಿ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. 

ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರೋಪಿಗಳಲ್ಲಿ ಕೆಲವರು ವಿಚಾರಣೆ ವೇಳೆ ಅಮೃತ್‌ ಪೌಲ್‌ ಹೆಸರನ್ನು ಹೇಳಿದ್ದಾರೆ ಎನ್ನಲಾಗಿದೆ. ಈ ಹಿಂದೆ ನಾಲ್ಕು ಬಾರಿ ವಿಚಾರಣೆ ನಡೆಸಿದ್ದ ಸಿಐಡಿ ಪೊಲೀಸರು ಎಡಿಜಿಪಿ ಅವರನ್ನು ಇಂದು ಮತ್ತೆ ವಿಚಾರಣೆಗೆ ಕರೆದಿದ್ದರು. ಇಂದು ವಿಚಾರಣೆ ನಡೆಸಿದ ಬಳಿಕ ಮತ್ತಷ್ಟು ಮಾಹಿತಿ ಕಲೆ ಹಾಕಲು ಅಮೃತ್‌ ಪೌಲ್‌ ಅವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

25 ಅಭ್ಯರ್ಥಿಗಳ ಜೊತೆ 30 ಲಕ್ಷ ರೂ. ಡೀಲ್‌ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ಈಗ ಮತ್ತಷ್ಟು ವಿಚಾರಣೆ ನಡೆಸಲು ಬಂಧಿಸಿದೆ. 

……

545 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಅಮೃತ್ ಪೌಲ್ ಅವರಿಗೆ ದೂರುಗಳು ಬಂದಿದ್ದವು. ಆದರೆ ಪ್ರಕರಣದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪಗಳು ಸಹ ಕೇಳಿಬಂದಿತ್ತು. ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಅಮೃತ್ ಪೌಲ್ ಅವರ ವರ್ಗಾವಣೆಗೆ ಪೊಲೀಸ್ ವಲಯದಲ್ಲಿಯೇ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವರ್ಗಾಯಿಸಲಾಗಿತ್ತು.

ಆರೋಪ ಏನು?

545 ಪಿಎಸ್‌ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್‌ಪಿ ಹಾಗೂ ಎಫ್‌ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ. ಬಂಧನಕ್ಕೆ ಒಳಗಾದ ಆರೋಪಿಗಳ ವಿಚಾರಣೆ ವೇಳೆ ಕೆಲವರು ಅಮೃತ್‌ ಪೌಲ್‌ ಹೆಸರನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. ಈ ಹಿಂದೆ ನಾಲ್ಕು ಬಾರಿ ವಿಚಾರಣೆ ನಡೆಸಿದ್ದ ಸಿಐಡಿ ಇಂದು ಮತ್ತೆ ವಿಚಾರಣೆಗೆ ಕರೆದಿತ್ತು. ಇಂದು ವಿಚಾರಣೆ ನಡೆಸಿದ ಬಳಿಕ ಮತ್ತಷ್ಟು ಮಾಹಿತಿ ಕಲೆ ಹಾಕಲು ಅಮೃತ್‌ ಪೌಲ್‌ ಅವರನ್ನು ಬಂಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು