4:40 AM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ರಾಜ್ಯ ರಾಜಕೀಯ: ಕುಮಾರಸ್ವಾಮಿ ಬಿಜೆಪಿ ಜತೆ ಸಖ್ಯ ಬೆಳೆಸಿದರೆ 12 ಮಂದಿ ಜನತಾ ದಳ ಶಾಸಕರು ಕಾಂಗ್ರೆಸ್ ಗೆ?

16/07/2023, 22:51

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ರಾಜ್ಯ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ ನಡೆಯುತ್ತಿದೆ. ಕಾರಣ ವರ್ಷದೊಳಗೆ ಮಹಾ ಚುನಾವಣೆ ಎದುರಾಗಲಿದೆ. ಬಿಜೆಪಿಗೆ ಗಳಿಸಿದನ್ನು ಉಳಿಸುವ ಚಿಂತೆಯಾದರೆ, ಕಾಂಗ್ರೆಸಿಗೆ ಹೊಸದಾಗಿ ಪಡೆಯುವ ಚಿಂತೆ ಕಾಡುತ್ತಿದೆ. ಈ ನಡುವೆ ಜಾತ್ಯತೀತ ಜನತಾ ದಳದ ಬೇರೆಯೇ ಆಟ ನಡೆಯುತ್ತಿದೆ.
ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ 28 ಕ್ಷೇತ್ರಗಳ ಪೈಕಿ ಕಳೆದ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಚಾಚಿಕೊಂಡಿತ್ತು. ಕಾಂಗ್ರೆಸಿನ ಅತಿರಥ ಮಹಾರಥರೆಲ್ಲ ಆ ಚುನಾವಣೆಯಲ್ಲಿ ಸೋತಿದ್ದರು. ಆದರೆ ರಾಜ್ಯದಲ್ಲಿ ಅಂದಿನ ಪರಿಸ್ಥಿತಿ ಈಗಿಲ್ಲ. ಕಾಂಗ್ರೆಸ್ ನಿಚ್ಚಳ ಬಹುಮತದಿಂದ ಅಧಿಕಾರಕ್ಕೆ ಬಂದಿದೆ. ಪ್ರಧಾನಿ ಮೋದಿ ಬಂದು ಪ್ರಚಾರ ಮಾಡಿದ ಕಡೆಗಳೆಲ್ಲ ಕಾಂಗ್ರೆಸ್ ಗೆದ್ದು ಬಿಟ್ಟಿದೆ. ಬಿಜೆಪಿ ಮೂರಂಕಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ. ಹಾಗೆ ಜಾತ್ಯತೀತ ಜನತಾ ದಳ ತನ್ನ ಬೇರನ್ನು ಭದ್ರವಾಗಿ ಊರಿದ್ದ ಹಳೆ ಮೈಸೂರು ಪ್ರಾಂತ್ಯದಲ್ಲೇ ನೆಲಕಚ್ಚಿದೆ. ಈ ಹಿನ್ನೆಲೆಯಲ್ಲಿ ಜನತಾ ದಳಕ್ಕೆ ಇದೀಗ ಅಸ್ತಿತ್ವವನ್ನು ಉಳಿಸಿಕೊಳ್ಳುವ ಪ್ರಶ್ನೆಯಾಗಿದೆ.
ಕುಮಾರಸ್ವಾಮಿ ಅವರು ಈ ಹಿಂದೆ ಬಿಜೆಪಿ ಜತೆ 20:20 ಸರಕಾರ ಮಾಡಿದ್ದಾರೆ. ಅವರಿಗೆ ಕಮಲ ಪಾಳಯದ ಸಖ್ಯ ಅದೇನು ಅಸಹನೀಯವಲ್ಲ. ಇದೇ ಕಾರಣದಿಂದ ಜನತಾದಳವನ್ನು ಬಿಜೆಪಿ ಜತೆ ವಿಲೀನ ಮಾಡಲು ಅಥವಾ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳಲು ಕುಮಾರಸ್ವಾಮಿ ಮುಂದಾಗಿದ್ದಾರೆ ಎನ್ನುವುದು ಈಗ ಹಳೆಯ ವಿಚಾರ. ಮುಸ್ಲಿಂ ಮತಗಳ ಮೇಲೆ ಕಣ್ಣಿಟ್ಟು ಕುಮಾರಸ್ವಾಮಿ ಅವರು ವಿಧಾನಸಭೆ ಚುನಾವಣೆಯಲ್ಲಿ ಹೋರಾಟ ನಡೆಸಿದ್ದರು. ಆದರೆ ರಾಜ್ಯದ ಮುಸ್ಲಿಂ ಮತದಾರರು ಕುಮಾರಸ್ವಾಮಿ ಅವರನ್ನು ನಂಬಲಿಲ್ಲ. ಬದಲಿಗೆ ಅವರು ಸಿದ್ದರಾಮಯ್ಯ ಅವರ ಕೈ ಹಿಡಿದರು. ಇದೇ ಕಾರಣದಿಂದ ಕಿಂಗ್ ಮೇಕರ್ ಆಗಬೇಕಿದ್ದ ಜನತಾ ದಳಕ್ಕೆ 20 ಸೀಟುಗಳು ಕೂಡ ಬಂದಿಲ್ಲ. ಇದರಿಂದ ಕುಮಾರಸ್ವಾಮಿ ಅವರು ಹತಾಶರಾಗಿದ್ದಾರೆ ಎಂದು ಅವರ ಆಪ್ತ ವಲಯದವರು ಹೇಳಿಕೊಳ್ಳುತ್ತಿದ್ದಾರೆ. ರಾಜ್ಯದ ಮುಸ್ಲಿಂ ಮತದಾರರು ಕುಮಾರಸ್ವಾಮಿಯ ಕೈ ಹಿಡಿಯಲಿಲ್ಲ. ಇದೀಗ ಕುಮಾರಸ್ವಾಮಿ ಅವರಿಗೂ ಮುಸ್ಲಿಂ ಸಮುದಾಯ ಬೇಕಿಲ್ಲ ಎನ್ನುವಂತೆ ಬಿಜೆಪಿ ಸಖ್ಯಕ್ಕೆ ಹಾತೊರೆಯುತ್ತಿದ್ದಾರೆ ಎಂಬ ಮಾಹಿತಿ ಇದೆ. ಇದೆಲ್ಲ ಬೆಳವಣಿಗೆಯನ್ನು ಆಡಳಿತರೂಢ ಕಾಂಗ್ರೆಸ್ ಮಾತ್ರವಲ್ಲದೆ, ಜನತಾದಳದಿಂದ ಗೆದ್ದು ಬಂದ ಶಾಸಕರು ಕೂಡ ಸೂಕ್ಷ್ಮವಾಗಿ ಅವಲೋಕನ ಮಾಡುತ್ತಿದ್ದಾರೆ. ಜನತಾ ದಳ ಶಾಸಕರ ಪೈಕಿ ಹೆಚ್ಚಿನವರು ಬಿಜೆಪಿ ಜತೆಗಿನ ಸಖ್ಯವನ್ನು ವಿರೋಧಿಸುತ್ತಿದ್ದಾರೆ ಎನ್ನಲಾಗಿದೆ. ಅಕಸ್ಮಾತ್ ಕುಮಾರಸ್ವಾಮಿ ಅವರು ಬಿಜೆಪಿ ಜತೆ ಕೈಜೋಡಿಸಿದರೆ, ಸುಮಾರು 12 ಮಂದಿ ಜನತಾ ದಳ ಶಾಸಕರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂಬ ಮಾಹಿತಿ ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ಕೂಡ ಜನತಾ ದಳ ಶಾಸಕರ ಜತೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು