9:41 PM Tuesday21 - July 2026
ಬ್ರೇಕಿಂಗ್ ನ್ಯೂಸ್
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹರ್ಷ

27/11/2024, 09:18

ಮಂಗಳೂರು(reporterkarnataka.com): ದ.ಕ ಜಿಲ್ಲೆಯ ಗ್ರಾಮ ಪಂಚಾಯಿತಿಗಳ 24 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 19 ಅಭ್ಯರ್ಥಿಗಳು ಹಾಗೂ ಬಂಟ್ವಾಳ ಪುರಸಭೆಯ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದು, ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯ, ಜನಪರ ಕೆಲಸ ಹಾಗು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಯನ್ನು ಜನತೆ ಒಪ್ಪಿಕೊಂಡಿದ್ದಾರೆ ಎನ್ನುವುದು ಈ ಫಲಿತಾಂಶದಿಂದ ಸ್ಪಷ್ಟವಾಗಿ ಗೋಚರಿಸಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.
ವಿಪಕ್ಷಗಳ ವಕ್ಫ್, ರೇಷನ್ ಕಾರ್ಡ್ ಗೊಂದಲ ಕುರಿತ ಅಪಪ್ರಚಾರಗಳಿಗೆ ಪ್ರಬುದ್ಧ ಮತದಾರರು ಯಾವುದೇ ಮನ್ನಣೆ ನೀಡಿಲ್ಲ ಎಂಬುದು ಸ್ಪಷ್ಟವಾಗಿದೆ. ಇದು ದ.ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಪುನಶ್ಚೇತನ ಮತ್ತು ಮುಂಬರುವ ಎಲ್ಲ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ಫಲಿತಾಂಶ ಮತ್ತು ಈ ಫಲಿತಾಂಶ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈಯನ್ನು ಮತ್ತಷ್ಟು ಬಲಪಡಿಸಿದೆ. ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರು, ಪಕ್ಷದ ಮುಖಂಡರು ಹಾಗು ಮತದಾರರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು
ಪದ್ಮರಾಜ್ ಆರ್. ಪೂಜಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು