8:29 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದಿಂದ ಜನತೆಯ ಜೇಬಿಗೆ ಕತ್ತರಿ : ಕೊರೊನಾದಿಂದ ತತ್ತರಿಸಿ ಹೋದ ನಡುವೆಯೆ ಈ ನಿರ್ಧಾರ !

10/06/2021, 05:42

ಬೆಂಗಳೂರು(Reporter Karnataka News) ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ಅಗತ್ಯ ದಿನ ಬಳಕೆಯ ವಸ್ತುಗಳ ದರ ಏರಿಕೆಯ ಹೊರೆ ಹೊರಲಾಗದೆ ಒದ್ದಾಡುತ್ತಿರುವ ಜನತೆಗೆ ರಾಜ್ಯ ಸರಕಾರ ವಿದ್ಯುತ್‌ ದರ ಏರಿಕೆ ಮಾಡಿ ಮತ್ತೊಂದು ಶಾಕ್‌ ನೀಡಿದೆ.

ಪ್ರತಿ ಯೂನಿಟ್‌ ವಿದ್ಯುತ್‌ ದರವನ್ನು ಸರಾಸರಿ 30 ಪೈಸೆ ಏರಿಕೆ ಮಾಡಲಾಗಿದೆ. ಒಟ್ಟಾರೆ ಸರಾಸರಿ ಶೇ. 3.84 ರಷ್ಟು ವಿದ್ಯುತ್‌ ದುಬಾರಿಯಾಗಿದೆ. ಏಪ್ರಿಲ್‌ 1 ರಿಂದಲೇ ಈ ಪರಿಷ್ಕೃತ ದರಗಳು ಜಾರಿಗೆ ಬಂದಿವೆ. ಮುಂದಿನ ಮೀಟರ್ ರೀಡಿಂಗ್‌ ವೇಳೆ ಈ ದರಗಳು ಅನ್ವಯವಾಗಲಿವೆ.
ಏಪ್ರಿಲ್‌ ಮತ್ತು ಮೇ ತಿಂಗಳ ದರ ಪರಿಷ್ಕರಣೆ ಬಾಕಿಯನ್ನು ಕೊರೊನಾ ಕಾರಣಕ್ಕೆ ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ವಸೂಲಿ ಮಾಡಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶಿಸಿದೆ. ಉಪಚುನಾವಣೆ, ಪಂಚಾಯತ್‌ ಚುನಾವಣೆ ಮತ್ತು ಕೊರೊನಾ ಕಾರಣಕ್ಕೆ ದರ ಪರಿಷ್ಕರಣೆ ವಿಳಂಬವಾಗಿದೆ ಎಂದು ಆಯೋಗ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು