3:58 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದಿಂದ ಜನತೆಯ ಜೇಬಿಗೆ ಕತ್ತರಿ : ಕೊರೊನಾದಿಂದ ತತ್ತರಿಸಿ ಹೋದ ನಡುವೆಯೆ ಈ ನಿರ್ಧಾರ !

10/06/2021, 05:42

ಬೆಂಗಳೂರು(Reporter Karnataka News) ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ಅಗತ್ಯ ದಿನ ಬಳಕೆಯ ವಸ್ತುಗಳ ದರ ಏರಿಕೆಯ ಹೊರೆ ಹೊರಲಾಗದೆ ಒದ್ದಾಡುತ್ತಿರುವ ಜನತೆಗೆ ರಾಜ್ಯ ಸರಕಾರ ವಿದ್ಯುತ್‌ ದರ ಏರಿಕೆ ಮಾಡಿ ಮತ್ತೊಂದು ಶಾಕ್‌ ನೀಡಿದೆ.

ಪ್ರತಿ ಯೂನಿಟ್‌ ವಿದ್ಯುತ್‌ ದರವನ್ನು ಸರಾಸರಿ 30 ಪೈಸೆ ಏರಿಕೆ ಮಾಡಲಾಗಿದೆ. ಒಟ್ಟಾರೆ ಸರಾಸರಿ ಶೇ. 3.84 ರಷ್ಟು ವಿದ್ಯುತ್‌ ದುಬಾರಿಯಾಗಿದೆ. ಏಪ್ರಿಲ್‌ 1 ರಿಂದಲೇ ಈ ಪರಿಷ್ಕೃತ ದರಗಳು ಜಾರಿಗೆ ಬಂದಿವೆ. ಮುಂದಿನ ಮೀಟರ್ ರೀಡಿಂಗ್‌ ವೇಳೆ ಈ ದರಗಳು ಅನ್ವಯವಾಗಲಿವೆ.
ಏಪ್ರಿಲ್‌ ಮತ್ತು ಮೇ ತಿಂಗಳ ದರ ಪರಿಷ್ಕರಣೆ ಬಾಕಿಯನ್ನು ಕೊರೊನಾ ಕಾರಣಕ್ಕೆ ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ವಸೂಲಿ ಮಾಡಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶಿಸಿದೆ. ಉಪಚುನಾವಣೆ, ಪಂಚಾಯತ್‌ ಚುನಾವಣೆ ಮತ್ತು ಕೊರೊನಾ ಕಾರಣಕ್ಕೆ ದರ ಪರಿಷ್ಕರಣೆ ವಿಳಂಬವಾಗಿದೆ ಎಂದು ಆಯೋಗ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು