11:12 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರಿ ನೌಕರರ ಸಂಘದ ನಂಜನಗೂಡು ಶಾಖೆ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ

27/10/2024, 18:30

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಇಡೀ ರಾಜ್ಯಾದ್ಯಂತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಅಕ್ಟೋಬರ್ 28ರಂದು ನಡೆಯುತ್ತಿರುವ ಚುನಾವಣೆ ನಡೆಯಲಿದ್ದು,
ನಂಜನಗೂಡು ಶಾಖೆಯ ಸರ್ಕಾರಿ ನೌಕರರ ಸಂಘಕ್ಕೂ ನಾಳೆ ಚುನಾವಣೆಗೆ ತಡೆಯಾಜ್ಞೆ ನೀಡಲಾಗಿದೆ.
ನಂಜನಗೂಡು ಶಾಖೆಯ ಚುನಾವಣೆ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.


ಚುನಾವಣಾಧಿಕಾರಿಯಾಗಿ ಬಾಲಸುಬ್ರಹ್ಮಣ್ಯ ಅವರು ಕಾರ್ಯನಿರ್ವಹಿಸುತ್ತಿದ್ದು ವಿವಿಧ ಕ್ಷೇತ್ರಗಳಿಂದ 31 ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆಯಲ್ಲಿ ಈಗಾಗಲೇ 17 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿವೆ. ಉಳಿದಂತೆ 14 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು.
ಯಾವುದೇ ಸಾರ್ವತ್ರಿಕ ಚುನಾವಣೆಗಿಂತ ಕಮ್ಮಿ ಇಲ್ಲವೆಂಬಂತೆ ಪೂರ್ವ ತಯಾರಿ ನಡೆಸಿಕೊಂಡು ನಾಮಪತ್ರವನ್ನು ಸಹ ಸಲ್ಲಿಸಿದ್ದ ಅಭ್ಯರ್ಥಿಆಕಾಂಕ್ಷಿಗಳಿಗೆ ಇದೀಗ ಬಿಗ್ ಶಾಕ್ ಆಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರ ಪ್ರತಿಷ್ಠೆಗೆ ನಂಜನಗೂಡಿನಲ್ಲಿ ಇಎಸ್ಐ ಸಿಬ್ಬಂದಿಗಳಿಗೆ ಮೋಸವಾಗಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಮತದಾನದ ಪಟ್ಟಿಯಿಂದಲೇ ಇಎಸ್ಐ ಸಿಬ್ಬಂದಿಗಳ ಹೆಸರು ರಿಜೆಕ್ಟೆಡ್ ಆಗಿದೆ. ಕೂಡಲೇ ಚುನಾವಣಾ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ನಂಜನಗೂಡು ನ್ಯಾಯಾಲಯ ತಡೆಯಾಜ್ಞೆ ನೀಡಿ ಚುನಾವಣೆಗೆ ಬ್ರೇಕ್ ಹಾಕಿದೆ. ನಂಜನಗೂಡು ತಾಲೂಕಿನಲ್ಲಿ 31 ನಿರ್ದೇಶಕರ ಆಯ್ಕೆಗೆ ನಡೆಯಬೇಕಿದ್ದ ಚುನಾವಣೆ ಇದಾಗಿದೆ.
ಕಳೆದ ಒಂದು ವಾರಗಳಿಂದ ಚುನಾವಣಾ ಪೂರ್ವ ತಯಾರಿಯಲ್ಲಿ 31 ಜನ ನಿರ್ದೇಶಕರ ಪೈಕಿ ಅವಿರೋಧವಾಗಿ ವಿವಿಧ ಇಲಾಖೆಗಳಿಂದ ಆಯ್ಕೆಯಾಗಿದ್ದ 17 ಜನ ನಿರ್ದೇಶಕರು ಇದ್ದಾರೆ.
ಸರ್ಕಾರಿ ನೌಕರರ ಸಂಘದ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನಿವೃತ್ತ ಅಧಿಕಾರಿ ಬಾಲಸುಬ್ರಹ್ಮಣ್ಯ ಗೆ ನ್ಯಾಯಾಲಯದ ನೋಟೀಸ್
ತಲುಪಿದೆ. ಸರ್ಕಾರಿ ಸಂಘದ ಬೈಲಾ ನಿಯಮಾವಳಿಗಳನ್ನು ಗಾಳಿಗೆ ತೂರಿ ಅವೈಜ್ಞಾನಿಕ ಚುನಾವಣಾ ನೀತಿ ವಿರುದ್ಧ ಇಎಸ್ಐ ಸಿಬ್ಬಂದಿಗಳ ಅಸಮಾಧಾನ ವ್ಯಕ್ತಪಡಿಸಿದ್ದರು.
ಸಂಘದ ಬೈಲಾ ನಿಯಮಾವಳಿ ಉಲ್ಲಂಘಸಿ, ಅಧಿಕಾರ ದುರುಪಯೋಗ ಮಾಡಿಕೊಂಡು, ತಮ್ಮ ಅನುಕೂಲಕ್ಕೆ ತಕ್ಕಂತೆ ಮತಕ್ಷೇತ್ರಗಳ ಹಂಚಿಕೆ ಮಾಡಿದ್ದಾರೆಂದು ಆರೋಪಸಿ ಇಎಸ್ಐ ನೌಕರ ಹರೀಶ್ ಕುಮಾರ್ ಕೋರ್ಟ್ ಮೊರೆ ಹೋಗಿದ್ದರು.
ರಾಜ್ಯಾಧ್ಯಕ್ಷ ಷಡಕ್ಷರಿ, ಜಿಲ್ಲಾಧ್ಯಕ್ಷ ಗೋವಿಂದರಾಜು, ತಾಲ್ಲೂಕು ಅಧ್ಯಕ್ಷ ರಂಗಸ್ವಾಮಿ, ಕಾರ್ಯದರ್ಶಿ ಪ್ರಸನ್ನ ಹಾಗೂ ತಾಲ್ಲೂಕು ಚುನಾವಣಾಧಿಕಾರಿಗಳಿಗೆ ಕೊರ್ಟನಿಂದ ಸಮನ್ಸ್ ಜಾರಿ ಮಾಡಲಾಗಿದೆ. ಅರ್ಜಿದಾರ ಎನ್ ಹರೀಶ್ ಕುಮಾರ್ ಪರ ವಕೀಲ ಗೋಳೂರು ಆರ್. ಪ್ರಸನ್ನ ವಾದ ಮಂಡಿಸಿದ್ದರು.
ಚುನಾವಣೆಗೆ ತಡೆಯಾಜ್ಞೆ ನೀಡಿದ ನ್ಯಾಯಾಲಯದಲ್ಲಿ ನವೆಂಬರ್ 21ಕ್ಕೆ ವಿಚಾರಣೆ ಮುಂದೂಡಿದೆ.
ಘಟನೆಗೆ ಸಂಬಂಧಿಸಿದಂತೆ ಚುನಾವಣೆ ಅಧಿಕಾರಿ ಬಾಲಸುಬ್ರಹ್ಮಣ್ಯ ಅವರು ಕೋರ್ಟ್ ಅಮೀನ್ ಅವರಿಂದ ತಡೆಯಾಜ್ಞೆ ಆದೇಶ ಪ್ರತಿಯನ್ನು ಪಡೆದು ಮಾತನಾಡಿದರು.
ಅರ್ಜಿದಾರ ಎನ್ ಹರೀಶ್ ಕುಮಾರ್ ಪರ ವಕೀಲರಾದ ಆರ್ ಪ್ರಸನ್ನ ಅವರು ಮಾತನಾಡಿ ಘಟನೆ ಬಗ್ಗೆ ವಿವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು