7:50 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ಪುತ್ತೂರು ಮೂಲದ ಡಾ.ಚಂದ್ರ ಪೂಜಾರಿ ನೇಮಕ

03/09/2023, 23:08

ಬೆಂಗಳೂರು(reporterkarnataka.com):
ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ , ಲೇಖಕ , ಚಿಂತಕ ಪುತ್ತೂರಿನ ಡಾ.ಚಂದ್ರ ಪೂಜಾರಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.
ಅಕಾಡೆಮಿಯು
ಧಾರವಾಡದಲ್ಲಿ ಕೇಂದ್ರ ಸ್ಥಾನವನ್ನು ಹೊಂದಿದೆ. ಅಕಾಡೆಮಿಯು ರಾಜ್ಯದ ಉನ್ನತ ಶಿಕ್ಷಣದ ನೀತಿ ನಿರೂಪಣೆಯನ್ನು ಸಿದ್ಧಗೊಳಿಸುವಲ್ಲಿ ಸರಕಾರಕ್ಕೆ ಸಲಹೆ , ಮಾರ್ಗಸೂಚಿಗಳನ್ನು ನೀಡುವ ಅತ್ಯುನ್ನತ ಸಂಸ್ಥೆಯಾಗಿದೆ.
ಡಾ.ಚಂದ್ರ ಪೂಜಾರಿ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ ಹಾಗೂ ಹಾವೇರಿ ಜಾನಪದ ವಿಶ್ವವಿದ್ಯಾಲಯದ ಅನ್ವಯಿಕ ಜಾನಪದ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿದ್ದಾರೆ.
ಸಮಾಜ ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ ಡಾ.ಚಂದ್ರ ಪೂಜಾರಿ ಅವರು ಪ್ರಥಮ ಬಾರಿಗೆ ರಾಜ್ಯದಲ್ಲಿ ದಲಿತ್ ಡೆವೆಲಪ್ಮೆಂಟ್ ಇಂಡೆಕ್ಸ್ ಸಿದ್ಧಗೊಳಿಸಿದ ತಜ್ಞರಾಗಿದ್ದಾರೆ.‌
ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕೋರ್ ಕಮಿಟಿ ಸದಸ್ಯರಾಗಿ, ಸ್ಟೇಟ್ ಹ್ಯೂಮನ್ ಡೆವಲಪ್ಮೆಂಟ್ ಇಂಡೆಕ್ಸ್ ಕೋರ್ ಕಮಿಟಿ ಸದಸ್ಯರರಾಗಿ , ರಾಜ್ಯ ಆಡಳಿತ ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿ, ಮೈಸೂರಿನ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದರು.
ಒಟ್ಟು 22 ಕೃತಿಗಳನ್ನು ಬರೆದಿರುವ ಡಾ.ಚಂದ್ರ ಪೂಜಾರಿ ಅವರು ಪ್ರಮುಖ ಪತ್ರಿಕೆಯ ಅಂಕಣಗಾರರಾಗಿ, ಪ್ರಜಾವಾಣಿ ಪತ್ರಿಕೆಯ ಲೇಖಕರಾಗಿ ನಿರಂತರವಾಗಿ ಬರವಣಿಗೆಯಲ್ಲಿ ತೊಡಗಿಸಿಕೊಂಡವರು.‌ ರಾಜ್ಯದ ವಿವಿಧ ಟಿ.ವಿ.ಮಾಧ್ಯಮಗಳಲ್ಲಿ ನಿರಂತರವಾಗಿ ವಿಚಾರ ಮಂಡನೆ ಮಾಡುತ್ತಿರುವರಾಗಿದ್ದಾರೆ.
ಮೂಲತಃ ಪುತ್ತೂರು ತಾಲೂಕಿನವರಾದ ಚಂದ್ರ ಪೂಜಾರಿ ಅವರು, ಸೈಂಟ್ ಪಿಲೋಮಿನಾ ಹೈಸ್ಕೂಲ್ , ಹಾಗೂ ಸೈಂಟ್ ಪಿಲೋಮಿನಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು . ಎಂಕಾಂ ಅಧ್ಯಯನವನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಿದ್ದರು, ಇದೇ ವಿಶ್ವವಿದ್ಯಾಲಯದಲ್ಲಿ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಷಯದಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದರು.‌

ಇತ್ತೀಚಿನ ಸುದ್ದಿ

ಜಾಹೀರಾತು