8:01 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ರಾಜ್ಯವಿಧಾನ ಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕೌಂಟ್ ಡೌನ್ ಶುರು; ಆಕಾಂಕ್ಷಿಗಳಲ್ಲಿ ತೀವ್ರಗೊಂಡ ಎದೆಬಡಿತ

11/04/2023, 10:49

ಹೊಸದಿಲ್ಲಿ(reporterkarnataka.com): ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ(ಬುಧವಾರ) ಬಿಡುಗಡೆಯಾಗುವ ಎಲ್ಲ ಲಕ್ಷಣಗಳು ಕಂಡು ಬಂದಿವೆ. ಈ ನಡುವೆ ಟಿಕೆಟ್
ಅಕಾಂಕ್ಷಿಗಳಲ್ಲಿ ಎದೆ ಬಡಿತ ತೀವ್ರಗೊಂಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸದಿಲ್ಲಿಯಲ್ಲಿ ಮಾಧ್ಯಮದವರ ಜತೆ ಮಾತನಾಡಿ, ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಂಬಂಧಿಸಿದಂತೆ ರೋಡ್ ಮ್ಯಾಪ್ ಸಿದ್ಧವಾಗಿದೆ. ಕೇಂದ್ರ ಗೃಹ ಸಚಿವರು ಸೋಮವಾರ ದಿಲ್ಲಿಯಿಂದ ಹೊರಗಡೆ ಇದ್ದ ಕಾರಣ ಮಂಗಳವಾರ ತಡರಾತ್ರಿ ಅಥವಾ ಬುಧವಾರ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ.
ಇದಕ್ಕೆ ಮುನ್ನ ದೆಹಲಿಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಕೇಂದ್ರ ಸಂಸದೀಯ ವ್ತವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರು ಮಂಗಳವಾರ ತಡರಾತ್ರಿ ಬಳಿಕ ಯಾವುದೇ ಕ್ಷಣದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ದಿನ ದಿಲ್ಲಿಯಲ್ಲಿ ಇರದ ಹಿನ್ನೆಲೆಯಲ್ಲಿ ಮಂಗಳವಾರ ಅಮಿತ್ ಶಾ ಅವರೊಂದಿಗೆ ಚರ್ಚಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಒಪ್ಪಿಗೆ ಪಡೆದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ಪಟ್ಟಿ ಈಗಾಗಲೇ ಅಂತಿಮಗೊಂಡಿದೆ. ಕೊನೆಯ ಕ್ಷಣದ ಬದಲಾವಣೆ ಇರಲೂ ಸಾಕು ಎಂದು ಅವರು ನುಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು