4:13 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ರಾಜ್ಯ ವಿಧಾನಸಭೆ ಚುನಾವಣೆ; ಜನಾಭಿಪ್ರಾಯ ಗಮನದಲ್ಲಿಟ್ಟುಕೊಂಡು ಟಿಕೆಟ್ ಹಂಚಿಕೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್

24/04/2022, 19:44

ಬೆಂಗಳೂರು(reporterkarnataka.com): ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಎಲ್ಲ ಸಿದ್ಧತೆ ನಡೆಸಿದೆ. ಸರ್ವೆ ಕಾರ್ಯ ಆರಂಭವಾಗುತ್ತಿದೆ. ಜನಾಭಿಪ್ರಾಯ, ಸರಕಾರದ ಅಭಿಪ್ರಾಯ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಭಾನುವಾರ ನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸದ್ಯಕ್ಕೆ ಚುನಾವಣೆ ನಡೆಯಲಿರುವುದರಿಂದ ಸಂಪುಟ ವಿಸ್ತರಣೆ ಪ್ರಸ್ತಾಪ ಇಲ್ಲ. ಪಕ್ಷ ಮತ್ತು ಸರಕಾರ ಜತೆಯಾಗಿ ಮುಂಬರುವ ಚುನಾವಣೆ ಎದುರಿಸಲಿದೆ ಎಂದರು.

ರಾಜ್ಯದಲ್ಲಿ ಬೇರೆ ಪಕ್ಷಗಳಿಂದ ಹಲವು ಶಾಸಕರು ನಮ್ಮನ್ನು ಸಂಪರ್ಕಿಸಿದ್ದಾರೆ. ಅವರು ಬಿಜೆಪಿ ಸೇರುವ ತವಕದಲ್ಲಿದ್ದಾರೆ. ನಮ್ಮ ರಾಷ್ಟ್ರೀಯ ನಾಯಕರ ಅಭಿಪ್ರಾಯ ಪಡೆದು ನಾನು ಮತ್ತು ಮುಖ್ಯಮಂತ್ರಿಗಳು ಸೇರಿ ಒಂದು ತೀರ್ಮಾನಕ್ಕೆ ಬರಲಿದ್ದೇವೆ. ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಮಾಡಲಿದ್ದೇವೆ ಎಂದು ನಳಿನ್ ನುಡಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ವಿಧಾನಸಭೆ ಚುನಾವಣೆ ವರೆಗೆ ಕಾದು ನೋಡಿ, ಯಾರೆಲ್ಲ ನಮ್ಮ ಪಕ್ಷಕ್ಕೆ ಬರುತ್ತಾರೆ ಎನ್ನುವುದು ನಿಮಗೆ ಗೊತ್ತಾಗಲಿದೆ. ಬಿಜೆಪಿಯಲ್ಲಿ ಸಾಕಷ್ಟು ಗೆಲ್ಲುವ ಅಭ್ಯರ್ಥಿಗಳಿದ್ದಾರೆ. ಹೀಗಾಗಿ ಅನ್ಯ ಪಕ್ಷದಿಂದ ನಮಗೆ ಶಾಸಕರ ಹೆಚ್ಚಿನ ಅಗತ್ಯವಿಲ್ಲ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು