7:26 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಜ್ಯ ವಿಧಾನಸಭೆ ಚುನಾವಣೆ: ಮತದಾನಕ್ಕೆ ವೇತನ ಸಹಿತ ರಜೆಗೆ ಕಾರ್ಮಿಕ ಆಯುಕ್ತರ ಸೂಚನೆ

28/04/2023, 20:55

ಮಂಗಳೂರು(reporterkarnataka.com): ರಾಜ್ಯ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಮೇ10ರ ಬುಧವಾರ ನಡೆಸಲಿರುವ ಮತದಾನಕ್ಕೆ ವೇತನ ಸಹಿತ ರಜೆ ನೀಡಲು ಸೂಚಿಸಲಾಗಿದೆ.
ಈ ದಿನದಂದು ಜಿಲ್ಲೆಯಾದ್ಯಂತ ಎಲ್ಲ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಕಲಂ 135(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ 1963 ಕಲಂ 3(ಎ)ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ನಿಯೋಜಕರು ಅನುವು ಮಾಡಿಕೊಡಬೇಕು.
ಆದ ಕಾರಣ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಮೇ10ರಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಂದು ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು