5:40 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ; ಮದ್ಯ ನಿಷೇಧ

25/04/2024, 20:19

ಬೆಂಗಳೂರು(reporterkarnataka.com): ಕರಾವಳಿಯ ದ.ಕ. ಲೋಕಸಭೆ ಕ್ಷೇತ್ರ ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಾಳೆ (ಏಪ್ರಿಲ್ 26ರಂದು) ನಡೆಯಲಿದ್ದು, ಸಕಲ ಸಿದ್ಧತೆ ನಡೆದಿದೆ.
ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ 6 ಗಂಟೆಗೆ ತೆರೆ ಬಿದ್ದಿತ್ತು. ನಂತರ ವಿವಿಧ ರಾಜಕೀಯ ಪಕ್ಷಗಳಿಂದ ಮನೆ ಮನೆ ಪ್ರಚಾರ ಕಾರ್ಯ ನಡೆಯಿತು.
ಮತದಾನ ನಡೆಯುವ 48 ತಾಸುಗಳ ಮುನ್ನ ಬಹಿರಂಗ ಪ್ರಚಾರ ಅಂತ್ಯಗೊಳ್ಳುತ್ತದೆ. ಇದರಂತೆ ಬುಧವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಇದರೊಂದಿಗೆ ಮದ್ಯದಂಗಡಿ, ಬಾರ್ ಆ್ಯಂಡ್ ರೆಸ್ಟೋರೆಂಟ್, ಪಬ್ ಗೆ ಬೀಗ ಹಾಕಲಾಗಿದೆ.
ಮೊದಲ ಹಂತದ ಚುನಾವಣೆಯಲ್ಲಿ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ 14 ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕಣದಲ್ಲಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನಿತರ ನಾಯಕರು ಹಾಗೂ ಮುಖಂಡರಿಗೆ ಕ್ಷೇತ್ರ ಬಿಟ್ಟು ತೆರಳುವಂತೆ ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು