4:32 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ರಾಜ್ಯದ 56 ಪ್ಯಾಸೆಂಜರ್ ಟ್ರೈನ್ ಸಂಚಾರ ರದ್ದು; ರೈಲ್ವೆ ಇಲಾಖೆ ನೀಡಿದ ಕಾರಣ ಏನು ಗೊತ್ತೇ?

04/09/2022, 20:38

ಬೆಂಗಳೂರು(reporterkarnataka.com):

ಬೆಂಗಳೂರು, ತುಮಕೂರು, ಶಿವಮೊಗ್ಗ, ಹುಬ್ಬಳ್ಳಿ ಸೇರಿದಂತೆ ವಿವಿಧ ಮಾರ್ಗಗಳ ಸುಮಾರು 56 ಪ್ಯಾಸೆಂಜರ್‌ ರೈಲುಗಳು ಇಂದು ಮತ್ತು ನಾಳೆ ಓಡಾಟವನ್ನು‌ ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. 

ತಾಂತ್ರಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ ಹಾಗು ದೊಡ್ಡ ಸಂಖ್ಯೆಯಲ್ಲಿ ರೈಲ್ವೆ ಸಿಬ್ಬಂದಿ ಇಲಾಖಾ ಪರೀಕ್ಷೆ ಹಾಜರಾಗುತ್ತಿರುವ ಕಾರಣ ವಿವಿಧ ಮಾರ್ಗಗಳ 56 ಪ್ಯಾಸೆಂಜರ್ ರೈಲುಗಳನ್ನು ರದ್ದು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು-ಮಾರಿಕುಪ್ಪಂ ಮಾರ್ಗದ 30 ರೈಲುಗಳು, ಬೆಂಗಳೂರು-ಮೈಸೂರು (10), ಬೆಂಗಳೂರು-ಧರ್ಮಾವರಂನ (6), ಬೆಂಗಳೂರು-ತುಮಕೂರು (4), ಬಂಗಾರಪೇಟೆ-ಮಾರಿಕುಪ್ಪಂನ (4), ಬೆಂಗಳೂರು -ಧರ್ಮಪುರಿ (4) ರೈಲುಗಳನ್ನು ರದ್ದು ಮಾಡಲಾಗಿದೆ.

ಅಷ್ಟೇ, ಅಲ್ಲ ಬೆಂಗಳೂರು ರೈಲ್ವೆ ವಿಭಾಗದಲ್ಲಿ ಕೆಎಸ್ ಆರ್ ಬೆಂಗಳೂರು ನಿಲ್ದಾಣದಿಂದ ಜೋಲಾರಪೇಟೆ, ಶಿವಮೊಗ್ಗ, ಹುಬ್ಬಳ್ಳಿ, ರಾಮನಗರ ಇನ್ನು ಹಲವೆಡೆ ರೈಲು ಸಂಚಾರ ರದ್ದಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು