3:56 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ರಾಜ್ಯದ 56 ಪ್ಯಾಸೆಂಜರ್ ಟ್ರೈನ್ ಸಂಚಾರ ರದ್ದು; ರೈಲ್ವೆ ಇಲಾಖೆ ನೀಡಿದ ಕಾರಣ ಏನು ಗೊತ್ತೇ?

04/09/2022, 20:38

ಬೆಂಗಳೂರು(reporterkarnataka.com):

ಬೆಂಗಳೂರು, ತುಮಕೂರು, ಶಿವಮೊಗ್ಗ, ಹುಬ್ಬಳ್ಳಿ ಸೇರಿದಂತೆ ವಿವಿಧ ಮಾರ್ಗಗಳ ಸುಮಾರು 56 ಪ್ಯಾಸೆಂಜರ್‌ ರೈಲುಗಳು ಇಂದು ಮತ್ತು ನಾಳೆ ಓಡಾಟವನ್ನು‌ ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. 

ತಾಂತ್ರಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ ಹಾಗು ದೊಡ್ಡ ಸಂಖ್ಯೆಯಲ್ಲಿ ರೈಲ್ವೆ ಸಿಬ್ಬಂದಿ ಇಲಾಖಾ ಪರೀಕ್ಷೆ ಹಾಜರಾಗುತ್ತಿರುವ ಕಾರಣ ವಿವಿಧ ಮಾರ್ಗಗಳ 56 ಪ್ಯಾಸೆಂಜರ್ ರೈಲುಗಳನ್ನು ರದ್ದು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು-ಮಾರಿಕುಪ್ಪಂ ಮಾರ್ಗದ 30 ರೈಲುಗಳು, ಬೆಂಗಳೂರು-ಮೈಸೂರು (10), ಬೆಂಗಳೂರು-ಧರ್ಮಾವರಂನ (6), ಬೆಂಗಳೂರು-ತುಮಕೂರು (4), ಬಂಗಾರಪೇಟೆ-ಮಾರಿಕುಪ್ಪಂನ (4), ಬೆಂಗಳೂರು -ಧರ್ಮಪುರಿ (4) ರೈಲುಗಳನ್ನು ರದ್ದು ಮಾಡಲಾಗಿದೆ.

ಅಷ್ಟೇ, ಅಲ್ಲ ಬೆಂಗಳೂರು ರೈಲ್ವೆ ವಿಭಾಗದಲ್ಲಿ ಕೆಎಸ್ ಆರ್ ಬೆಂಗಳೂರು ನಿಲ್ದಾಣದಿಂದ ಜೋಲಾರಪೇಟೆ, ಶಿವಮೊಗ್ಗ, ಹುಬ್ಬಳ್ಳಿ, ರಾಮನಗರ ಇನ್ನು ಹಲವೆಡೆ ರೈಲು ಸಂಚಾರ ರದ್ದಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು