5:10 AM Sunday5 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ರಾಜ್ಯದ 6 ಮಂದಿ ನಕ್ಸಲರು ಶೀಘ್ರವೇ ಮುಖ್ಯವಾಹಿನಿಗೆ?: ಸರಕಾರದಿಂದ ಪ್ರಕ್ರಿಯೆ ಚುರುಕು

05/01/2025, 19:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡಿನಲ್ಲಿ ಉಳಿದಿರುವ ನಕ್ಸಲರನ್ನು ಮರಳಿ ಮುಖ್ಯವಾಹಿನಿಗೆ ತರುವ ಪ್ರಕ್ರಿಯೆ ಆರಂಭವಾಗಿದ್ದು, ಮುಂಡಗಾರು ಲತಾ ಸೇರಿ 6 ಜನ ಶೀಘ್ರವೇ ಮುಖ್ಯವಾಹಿನಿಗೆ ಬರಲಿದ್ದಾರೆ.
ಮುಂಡಗಾರು ಲತಾ, ಸುಂದರಿ ಕುಲ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರೆಪ್ಪ ಅರೋಲಿ, ಕೆ.ವಸಂತ, ಟಿ.ಎನ್.ಜೀಶ್ ಮುಖ್ಯ ವಾಹಿನಿಗೆ ಬರಲು ಒಪ್ಪಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಗುಪ್ತಚರ ಇಲಾಖೆ ಅಧಿಕಾರಿಗಳ ಜತೆ ನಕ್ಸಲ್ ಶರಣಾಗತಿ ಸಮಿತಿ, ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರು  ಮೇಲಿಂದ ಮೇಲೆ ಸಭೆಗಳನ್ನು ನಡೆಸಿವೆ. ಒಂದೆರಡು ದಿನಗಳಲ್ಲೇ ನಕ್ಸಲರು ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆಗಳು ಅಂತಿಮಗೊಳ್ಳುವ ಸಾಧ್ಯತೆ ಇದೆ. ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆಗಳು ಘನತೆಯುತವಾಗಿ ನಡೆಯಬೇಕು. ಅವರ ಆತ್ಮಗೌರವಕ್ಕೆ ಧಕ್ಕೆಯಾಗಬಾರದು. ಹೋರಾಟದ ಮಾರ್ಗ ಬದಲಿಸಿ ಪ್ರಜಾತಾಂತ್ರಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ತಡೆಯಾಗಬಾರದು ಎಂಬ ಮನವಿಯನ್ನು ಸರ್ಕಾರವೂ ಒಪ್ಪಿದೆ.
ಮುಖ್ಯವಾಹಿನಿಗೆ ಬಂದ ಬಳಿಕ ಜೈಲಿನಲ್ಲಿ ಕೊಳೆಯುವ ಸ್ಥಿತಿ ಇರಬಾರದು. ಸಂಬಂಧ ಇಲ್ಲದಿದ್ದರೂ ಹಲವು ಪ್ರಕರಣಗಳಲ್ಲಿ ಅವರ ಹೆಸರು ಸೇರ್ಪಡೆಯಾಗಿದ್ದು, ಅವುಗಳಿಂದ ಮುಕ್ತಿ ಸಿಗಬೇಕು. ಮುಖ್ಯವಾಹಿನಿಗೆ ಬಂದ ಬಳಿಕ ಬೇಗನೆ ಜಾಮೀನಿನ ಮೇಲೆ ಹೊರಗೆ ಬರಲು ಸಹಕರಿಸಬೇಕು ಎಂಬ ಮನವಿಗೂ ಸರ್ಕಾರ ಸ್ಪಂದಿಸಿದೆ. ಕಾನೂನು ಸೇವಾ ಪ್ರಾಧಿಕಾರದಿಂದ ನೆರವು ಕೊಡಿಸುವ ಭರವಸೆಯನ್ನೂ ನೀಡಿದೆ ಎಂದೂ ಮೂಲಗಳು ಹೇಳಿವೆ.
ಎಲ್ಲಾ ಮೊಕದ್ದಮೆಗಳನ್ನು ವಿಶೇಷ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಲು ಸಹಕಾರ ನೀಡಲಾಗುವುದು. ಪ್ರವರ್ಗ –ಎ ವರ್ಗಕ್ಕೆ ಸೇರಿದವರಿಗೆ ₹7.50 ಲಕ್ಷ, ಪ್ರವರ್ಗ –ಬಿ ವರ್ಗಕ್ಕೆ ₹4 ಲಕ್ಷ ಆರ್ಥಿಕ ನೆರವನ್ನು ಮೂರು ಹಂತಗಳಲ್ಲಿ ನೀಡಲಾಗುವುದು. ಕೌಶಲ ತರಬೇತಿ ನೀಡಲಾಗುವುದು. ಕೇರಳ, ಕರ್ನಾಟಕ, ತಮಿಳುನಾಡು ಸೇರಿ ಎಲ್ಲಾ ಸರ್ಕಾರಗಳೂ ನಕ್ಸಲರ ಬಗ್ಗೆ ಅನುಕಂಪದಿಂದಲೇ ವರ್ತಿಸುತ್ತವೆ ಎಂಬ ಭರವಸೆಯನ್ನು ಸರ್ಕಾರ ನೀಡಿದೆ.
ಈ ಕುರಿತು ಶಾಂತಿಗಾಗಿ ನಾಗರಿಕ ವೇದಿಕೆಯ ಕೆ.ಎಲ್.ಅಶೋಕ್ ಅವರನ್ನು ಮಾಧ್ಯಮದವರು ಸಂಪರ್ಕಿಸಿದಾಗ, ‘ಮುಖ್ಯವಾಹಿನಿಗೆ ಬರಲು ಬಯಸುತ್ತಿರುವ ನಕ್ಸಲರ ಬೇಡಿಕೆಗಳು ಸರಿಯಾಗಿವೆ. ಸರ್ಕಾರ ಅವುಗಳನ್ನು ಪರಿಗಣಿಸಬೇಕು’ ಎಂದು ಪ್ರತಿಕ್ರಿಯಿಸಿದರು.

*ನಕ್ಸಲರ ಬೇಡಿಕೆಗಳೇನು?:*

* ಭೂಮಿ ಇಲ್ಲದ ಕುಟುಂಬಕ್ಕೆ ಐದು ಎಕರೆ ಕೃಷಿ ಭೂಮಿ ನೀಡಬೇಕು, ಶಾಶ್ವತ ಹಕ್ಕುಪತ್ರ ನೀಡಬೇಕು.

* ಎಲ್ಲಾ ಆದಿವಾಸಿ ಕುಟುಂಬಗಳಿಗೆ ಭೂಮಿ ಮತ್ತು ವಸತಿ ನೀಡಬೇಕು.

* ಕೃಷಿ ಯೋಗ್ಯ ಪಾಳುಭೂಮಿಯನ್ನು ಭೂಹೀನರಿಗೆ ಹಂಚಬೇಕು.

* ಆಹಾರದ ಬೆಳೆ, ಮುಖ್ಯವಾಗಿ ಭತ್ತ ಬೆಳೆಯುವ ರೈತರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕು. ಅವರಿಗೆ ಸಂಪೂರ್ಣ ಬೆಂಬಲವಾಗಿ ನಿಲ್ಲಬೇಕು. 

* ಕಸ್ತೂರಿ ರಂಗನ್ ವರದಿ ರದ್ದುಗೊಳಿಸಬೇಕು.

* ಹೈಟೆಕ್ ಟೂರಿಸಂ ನಿಲ್ಲಸಿ ಪರಿಸರ ರಕ್ಷಿಸಬೇಕು.

* ಆದಿವಾಸಿಗಳಿಗೆ ಕಾಡಿನ ಮೇಲಿನ ಎಲ್ಲ ರೀತಿಯ ಅಧಿಕಾರ ಇರಬೇಕು

* ಕುದುರೆಮುಖ ರಾಷ್ಟ್ರೀಯ ಉದ್ಯಾನವನ ರದ್ದಾಬೇಕು.

* ನಿರುದ್ಯೋಗಿಗಳಿಗೆ ಅರ್ಹತೆಗೆ ತಕ್ಕಂತೆ ಉದ್ಯೋಗ ಕೊಡಬೇಕು.

* ಸಾಂಸ್ಕೃತಿಕ ಬದಲಾವಣೆಗಳಿಂದ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು.

* ಹವಾಮಾನ ಬದಲಾವಣೆಯಿಂದ ಕೃಷಿ ಬೆಳೆ, ಮನುಷ್ಯನ ಬದುಕು ಮತ್ತು ಪ್ರಕೃತಿಯ ಮೇಲೆ ಬೀರುತ್ತಿರುವ ಪರಿಣಾಮದ ಬಗ್ಗೆ ವೈಜ್ಞಾನಿಕ ಕಾರಣಗಳನ್ನು ಕಂಡುಕೊಳ್ಳಬೇಕು.

* ಮೂರು ರಾಜ್ಯಗಳಲ್ಲಿ (ಕರ್ನಾಟಕ, ತಮಿಳುನಾಡು, ಕೇರಳ) ರೈತರನ್ನು ಒಕ್ಕಲೆಬ್ಬಿಸುವುದನ್ನು ನಿಲ್ಲಿಸಬೇಕು.

* ರೈತರ ಒತ್ತುವರಿ ಭೂಮಿ ತೆರವುಗೊಳಿಸುವುದನ್ನು ತಕ್ಷಣವೇ ನಿಲ್ಲಿಸಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು