8:31 PM Monday20 - January 2025
ಬ್ರೇಕಿಂಗ್ ನ್ಯೂಸ್
ಮಹಾತ್ಮ ಗಾಂಧಿ ರಿಯಲ್ ಗಾಂಧಿ, ಸೋನಿಯಾ, ರಾಹುಲ್, ಪ್ರಿಯಾಂಕ ಅವರು ನಕಲಿ ಗಾಂಧಿಗಳು:… ಬೆಂಗಳೂರು ಐಟಿ ಹಬ್, ವ್ಯೂಹಾತ್ಮಕ ನಗರ; ಇಲ್ಲೇ ಐಕ್ಯಾಟ್ ಕೇಂದ್ರ ಖಚಿತ: ಕೇಂದ್ರ… ಮುಡಾ ಕುರಿತು ಇಡಿ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ 5ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಜನವಾದಿ ಮಹಿಳಾ… ಮಂಗಳೂರಿನ ಜನತೆಗೆ ಕಲುಷಿತ ನೀರು ಪೂರೈಕೆ: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ… ಭಾರತಿ ಏರ್‌ಟೆಲ್ ಮತ್ತು ಬಜಾಜ್ ಫೈನಾನ್ಸ್ ನಿಂದ ಹಣಕಾಸಿನ ಸೇವೆಗಳಿಗಾಗಿ ಅತಿದೊಡ್ಡ ಡಿಜಿಟಲ್… ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರ ಸಮ್ಮತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ… ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ… ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ

ಇತ್ತೀಚಿನ ಸುದ್ದಿ

ರಾಜ್ಯದ ಆರ್ಥಿಕತೆ ವೇಗ ಪಡೆದಿದೆ; ದೇಶದಲ್ಲೇ ರಾಜ್ಯದ ಜಿಡಿಪಿ ನಂಬರ್ 1 ಆಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

02/12/2024, 23:59

ತುಮಕೂರು(reporterkarnataka.com): ಇಡೀ ದೇಶದಲ್ಲಿ ನಮ್ಮ ರಾಜ್ಯದ ಜಿಡಿಪಿ ನಂಬರ್ ಒಂದು ಆಗಿದೆ. ದೇಶದ ಜಿಡಿಪಿ 8 ಇದ್ದರೆ ನಮ್ಮ ರಾಜ್ಯದ ಜಿಡಿಪಿ 10ಕ್ಕೆ ತಲುಪಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತುಮಕೂರಿನಲ್ಲಿ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ರಾಜ್ಯದ ಎಲ್ಲ ಜಾತಿ- ಧರ್ಮದವರ ಕೊಡುಗೆಯಿಂದ ಇದು ಸಾಧ್ಯವಾಗಿದೆ ಎಂದು ಸಿದ್ದರಾಮಯ್ಯ ನುಡಿದರು.
ನಮ್ಮ 5 ಗ್ಯಾರಂಟಿ ಗಳು ಹಾಗೂ ಅಭಿವೃದ್ಧಿ ಯೋಜನೆಗಳು ಎಲ್ಲ ಜಾತಿ, ಧರ್ಮದವರಿಗೆ ಸೇರಿದೆ. ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ. ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಯೋಜನೆಗಳನ್ನು ನಾವು ಕೊಡುತ್ತಲೇ ಬಂದಿದ್ದೇವೆ. ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆ ರೂಪಿಸುತ್ತೇವೆ ಎಂದು ಅವರು ನುಡಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ನಗರಾಭಿವೃದ್ಧಿ ಸಚಿವ ಭೈರತಿ
ಸುರೇಶ್, ಸಹಕಾರಿ ಸಚಿವ ಕೆ.ಎನ್. ರಾಜಣ್ಣ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮುಂತಾದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು