7:05 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ರಾಜ್ಯದ ಎಲ್ಲ 224 ಕ್ಷೇತ್ರ ನಮ್ಮ ಟಾರ್ಗೆಟ್, ಸಿಎಂ ಅಭ್ಯರ್ಥಿ ಬಗ್ಗೆ ಯಾರು ಮಾತನಾಡಬಾರದು: ಡಿ.ಕೆ. ಶಿವಕುಮಾರ್

04/07/2021, 18:43

ಬೆಂಗಳೂರು(reporterkarnataka news):

ಕಾಂಗ್ರೆಸ್ ಪಕ್ಷಕ್ಕೆ  ದೇಶದ ಇತಿಹಾಸದಲ್ಲೇ ಪುರಾತನ ಇತಿಹಾಸವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಡಿಪಾಯ ಗಟ್ಟಿಯಾಗಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ 224 ಸ್ಥಾನಗಳನ್ನು ಗೆಲ್ಲುವುದು ನಮ್ಮ ಟಾರ್ಗೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಹೇಳಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ, ಜನರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದರು.

ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರವರೆಗೂ ಭ್ರಷ್ಟಾಚಾರ ತಾರಕಕ್ಕೇರಿದೆ. ಸಚಿವರ ಪಿಎಗಳಿಂದ ಹಿಡಿದು ತಾಲೂಕು ಮಟ್ಟದ ತಹಶೀಲ್ದಾರ್ ಕಚೇರಿವರೆಗೂ ಲಂಚಕ್ಕೆ ಬೇಡಿಕೆ ಇಡಲಾಗುತ್ತಿದೆ. ಬಿಜೆಪಿ ಆಡಳಿತಕ್ಕೆ ಜನರು ಹೈರಾಣಾಗಿದ್ದಾರೆ ಎಂದು ಅವರು ಕಿಡಿಕಾರಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೆಪಿಸಿಸಿ ಅಧ್ಯಕ್ಷನಾಗಿ ನಾನು ಯಾರೊಬ್ಬರ ಇಂತಹ ಹೇಳಿಕೆಗಳಿಗೂ ಮಹತ್ವ ಕೊಡಲ್ಲ. ಶಾಸಕ ಜಮೀರ್ ಅಹ್ಮದ್ ಹೇಳಿಕೆಯಿಂದ ಹಿಡಿದು ಸಂಸದ ಡಿ.ಕೆ ಸುರೇಶ್ ಹೇಳಿಕೆವರೆಗೂ ಯಾರೊಬ್ಬರ ಹೇಳಿಕೆಗೂ ಪ್ರತಿಕ್ರಿಯಿಸಲ್ಲ. ಪಕ್ಷದ ಮುಖಂಡರು ವೈಯಕ್ತಿಕ ಅಭಿಪ್ರಾಯಗಳನ್ನು ಕೊಡುವ ಬದಲು ತಮ್ಮ ತಮ್ಮ ಕ್ಷೇತ್ರಗಳಿಗೆ ತೆರಳಿ ಜನರ ಸಂಕಷ್ಟಗಳನ್ನು ಆಲಿಸಿ ಅಭಿವೃದ್ಧಿಯತ್ತ, ಪಕ್ಷ ಸಂಘಟನೆಯತ್ತ ಗಮನಕೊಡಲಿ. ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವಾಗಿ ಯಾರೂ ಮಾತನಾಡಬಾರದು. ಪಕ್ಷವನ್ನು ಅಧಿಕಾರಕ್ಕೆ ತರುವನಿಟ್ಟಿನಲ್ಲಿ ಮಾತ್ರ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ಪಕ್ಷಬಿಟ್ಟು ಹೋದವರು ಮರಳಿ ಪಕ್ಷಕ್ಕೆ ಬರಲು ಅವಕಾಶವಿದೆ. ಬಿಟ್ಟುಹೋದವರು ಮೊದಲು ಅರ್ಜಿ ಹಾಕಲಿ. ಅರ್ಜಿ ಹಾಕಿದರೆ ನಂತರ ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು