10:42 AM Monday16 - June 2025
ಬ್ರೇಕಿಂಗ್ ನ್ಯೂಸ್
Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,…

ಇತ್ತೀಚಿನ ಸುದ್ದಿ

ರಾಜ್ಯದ ಎಲ್ಲ 224 ಕ್ಷೇತ್ರ ನಮ್ಮ ಟಾರ್ಗೆಟ್, ಸಿಎಂ ಅಭ್ಯರ್ಥಿ ಬಗ್ಗೆ ಯಾರು ಮಾತನಾಡಬಾರದು: ಡಿ.ಕೆ. ಶಿವಕುಮಾರ್

04/07/2021, 18:43

ಬೆಂಗಳೂರು(reporterkarnataka news):

ಕಾಂಗ್ರೆಸ್ ಪಕ್ಷಕ್ಕೆ  ದೇಶದ ಇತಿಹಾಸದಲ್ಲೇ ಪುರಾತನ ಇತಿಹಾಸವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಡಿಪಾಯ ಗಟ್ಟಿಯಾಗಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ 224 ಸ್ಥಾನಗಳನ್ನು ಗೆಲ್ಲುವುದು ನಮ್ಮ ಟಾರ್ಗೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಹೇಳಿದ ಅವರು, ರಾಜ್ಯ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುವಲ್ಲಿ, ಜನರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದರು.

ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರವರೆಗೂ ಭ್ರಷ್ಟಾಚಾರ ತಾರಕಕ್ಕೇರಿದೆ. ಸಚಿವರ ಪಿಎಗಳಿಂದ ಹಿಡಿದು ತಾಲೂಕು ಮಟ್ಟದ ತಹಶೀಲ್ದಾರ್ ಕಚೇರಿವರೆಗೂ ಲಂಚಕ್ಕೆ ಬೇಡಿಕೆ ಇಡಲಾಗುತ್ತಿದೆ. ಬಿಜೆಪಿ ಆಡಳಿತಕ್ಕೆ ಜನರು ಹೈರಾಣಾಗಿದ್ದಾರೆ ಎಂದು ಅವರು ಕಿಡಿಕಾರಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೆಪಿಸಿಸಿ ಅಧ್ಯಕ್ಷನಾಗಿ ನಾನು ಯಾರೊಬ್ಬರ ಇಂತಹ ಹೇಳಿಕೆಗಳಿಗೂ ಮಹತ್ವ ಕೊಡಲ್ಲ. ಶಾಸಕ ಜಮೀರ್ ಅಹ್ಮದ್ ಹೇಳಿಕೆಯಿಂದ ಹಿಡಿದು ಸಂಸದ ಡಿ.ಕೆ ಸುರೇಶ್ ಹೇಳಿಕೆವರೆಗೂ ಯಾರೊಬ್ಬರ ಹೇಳಿಕೆಗೂ ಪ್ರತಿಕ್ರಿಯಿಸಲ್ಲ. ಪಕ್ಷದ ಮುಖಂಡರು ವೈಯಕ್ತಿಕ ಅಭಿಪ್ರಾಯಗಳನ್ನು ಕೊಡುವ ಬದಲು ತಮ್ಮ ತಮ್ಮ ಕ್ಷೇತ್ರಗಳಿಗೆ ತೆರಳಿ ಜನರ ಸಂಕಷ್ಟಗಳನ್ನು ಆಲಿಸಿ ಅಭಿವೃದ್ಧಿಯತ್ತ, ಪಕ್ಷ ಸಂಘಟನೆಯತ್ತ ಗಮನಕೊಡಲಿ. ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವಾಗಿ ಯಾರೂ ಮಾತನಾಡಬಾರದು. ಪಕ್ಷವನ್ನು ಅಧಿಕಾರಕ್ಕೆ ತರುವನಿಟ್ಟಿನಲ್ಲಿ ಮಾತ್ರ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ಪಕ್ಷಬಿಟ್ಟು ಹೋದವರು ಮರಳಿ ಪಕ್ಷಕ್ಕೆ ಬರಲು ಅವಕಾಶವಿದೆ. ಬಿಟ್ಟುಹೋದವರು ಮೊದಲು ಅರ್ಜಿ ಹಾಕಲಿ. ಅರ್ಜಿ ಹಾಕಿದರೆ ನಂತರ ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು